Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ

Updated on: Jun 20, 2025 | 6:49 AM

ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾವ ದಿನ, ಯಾವ ದಾನವನ್ನು ಮಾಡುವುದು ಶ್ರೇಷ್ಠ ಎಂಬುದನ್ನು ವಿವರಿಸಿದ್ದಾರೆ. ಗೋಧಿ, ಅಕ್ಕಿ, ತೊಗರಿಬೇಳೆ, ಹೆಸರುಬೇಳೆ, ಕಡಲೆಕಾಳು ಮತ್ತು ಎಳ್ಳಿನ ದಾನದ ಮಹತ್ವವನ್ನು ವಿವರಿಸಲಾಗಿದೆ. ಪ್ರತಿ ದಿನದ ದಾನದಿಂದ ಪಡೆಯುವ ಫಲಗಳ ಬಗ್ಗೆಯೂ ತಿಳಿಸಲಾಗಿದೆ.

ಬೆಂಗಳೂರು, ಜೂನ್​ 20: ಡಾ. ಬಸವರಾಜ್ ಗುರೂಜಿ ದೈನಂದಿನ ಭಕ್ತಿ ಕಾರ್ಯಕ್ರಮದಲ್ಲಿ ಯಾವ ದಿನ, ಯಾವ ದಾನ ಮಾಡುವುದು ಶ್ರೇಷ್ಠ ಎಂಬುದರ ಕುರಿತು ತಿಳಿಸಿದ್ದಾರೆ. ಕಲಿಯುಗದಲ್ಲಿ ದಾನಕ್ಕೆ ಅಪಾರ ಮಹತ್ವವಿದೆ. ಪ್ರತಿ ದಿನವೂ ವಿಭಿನ್ನ ದಾನಗಳನ್ನು ಮಾಡುವುದರಿಂದ ವಿಭಿನ್ನ ಫಲಗಳನ್ನು ಪಡೆಯಬಹುದಾಗಿದೆ. ಉದಾಹರಣೆಗೆ, ಭಾನುವಾರ ಗೋಧಿ ಅಥವಾ ಗೋಧಿಯಿಂದ ಮಾಡಿದ ಪದಾರ್ಥಗಳ ದಾನವು ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಸೋಮವಾರ ಅಕ್ಕಿ, ಅನ್ನ, ಹಾಲು ಅಥವಾ ಮೊಸರಿನ ದಾನವು ಸಂಸಾರದಲ್ಲಿ ಸುಖ ಮತ್ತು ನೆಮ್ಮದಿಯನ್ನು ತರುತ್ತದೆ. ವಿಡಿಯೋ ನೋಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More