Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?

Updated on: Feb 09, 2026 | 7:43 AM

ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು. ಇದನ್ನು ಉತ್ತರ-ಈಶಾನ್ಯ ಅಥವಾ ದಕ್ಷಿಣ-ನೈರುತ್ಯ ದಿಕ್ಕಿನಲ್ಲಿ ಬೆಳೆಸುವುದು ಶುಭ ಎಂದು ವಾಸ್ತು ಹೇಳುತ್ತದೆ. ಇದು ವಾಸ್ತು ದೋಷಗಳನ್ನು ನಿವಾರಿಸಿ, ಮನೆಯ ಸುತ್ತಲೂ ಸಕಾರಾತ್ಮಕ ಶಕ್ತಿಯನ್ನು ಪ್ರಸಾರ ಮಾಡುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದ ಹದಿನಾಲ್ಕು ರತ್ನಗಳಲ್ಲಿ ಪಾರಿಜಾತವೂ ಒಂದು. ಇದನ್ನು ಮಹಾಲಕ್ಷ್ಮಿಯ ಸಹೋದರ ಎಂದು ಸಹ ಪರಿಗಣಿಸಲಾಗುತ್ತದೆ. ಮನೆಯ ಸುತ್ತಲೂ ಪಾರಿಜಾತ ಗಿಡವಿದ್ದರೆ ಮಹಾಲಕ್ಷ್ಮಿ, ಮಹಾಸರಸ್ವತಿ, ಮಹಾಕಾಳಿ ಈ ತ್ರಿಶಕ್ತಿಗಳ ಅನುಗ್ರಹ ಇರುತ್ತದೆ ಎಂದು ನಂಬಲಾಗಿದೆ. ಸೂರ್ಯನ ಕಿರಣಗಳು ಇದಕ್ಕೆ ಬೀಳುವುದು ಅವಶ್ಯಕ. ನೆಲಕ್ಕೆ ಬಿದ್ದ ಹೂವುಗಳನ್ನು ಸಹ ಪೂಜೆಗೆ ಬಳಸಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ.

ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು. ಇದನ್ನು ಉತ್ತರ-ಈಶಾನ್ಯ ಅಥವಾ ದಕ್ಷಿಣ-ನೈರುತ್ಯ ದಿಕ್ಕಿನಲ್ಲಿ ಬೆಳೆಸುವುದು ಶುಭ ಎಂದು ವಾಸ್ತು ಹೇಳುತ್ತದೆ. ಇದು ವಾಸ್ತು ದೋಷಗಳನ್ನು ನಿವಾರಿಸಿ, ಮನೆಯ ಸುತ್ತಲೂ ಸಕಾರಾತ್ಮಕ ಶಕ್ತಿಯನ್ನು ಪ್ರಸಾರ ಮಾಡುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದ ಹದಿನಾಲ್ಕು ರತ್ನಗಳಲ್ಲಿ ಪಾರಿಜಾತವೂ ಒಂದು. ಇದನ್ನು ಮಹಾಲಕ್ಷ್ಮಿಯ ಸಹೋದರ ಎಂದು ಸಹ ಪರಿಗಣಿಸಲಾಗುತ್ತದೆ. ಮನೆಯ ಸುತ್ತಲೂ ಪಾರಿಜಾತ ಗಿಡವಿದ್ದರೆ ಮಹಾಲಕ್ಷ್ಮಿ, ಮಹಾಸರಸ್ವತಿ, ಮಹಾಕಾಳಿ ಈ ತ್ರಿಶಕ್ತಿಗಳ ಅನುಗ್ರಹ ಇರುತ್ತದೆ ಎಂದು ನಂಬಲಾಗಿದೆ. ಸೂರ್ಯನ ಕಿರಣಗಳು ಇದಕ್ಕೆ ಬೀಳುವುದು ಅವಶ್ಯಕ. ನೆಲಕ್ಕೆ ಬಿದ್ದ ಹೂವುಗಳನ್ನು ಸಹ ಪೂಜೆಗೆ ಬಳಸಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.