Daily Devotional: ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ. ಕುಮಾರ ಸ್ವಾಮಿಯು ನಾಗಾಂಶವನ್ನು ಹೊಂದಿರುವ ಕಾರಣ, ವಿವಾಹ, ಸಂತಾನ ಮತ್ತು ಸರ್ಪದೋಷ ನಿವಾರಣೆಗಾಗಿ ಭಕ್ತರು ಕುಕ್ಕೆ, ಘಾಟಿಯಂತಹ ಸುಬ್ರಹ್ಮಣ್ಯ ದೇವಾಲಯಗಳಿಗೆ ಭೇಟಿ ನೀಡುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಜನವರಿ 24: ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಪುರಾಣಗಳ ಪ್ರಕಾರ, ತಾರಕಾಸುರನನ್ನು ಸಂಹಾರ ಮಾಡಲು ಸುಬ್ರಹ್ಮಣ್ಯ ಸ್ವಾಮಿಯು ಅವತರಿಸಿದ ದಿನ ಇದಾಗಿದೆ.
ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ. ಕುಮಾರ ಸ್ವಾಮಿಯು ನಾಗಾಂಶವನ್ನು ಹೊಂದಿರುವ ಕಾರಣ, ವಿವಾಹ, ಸಂತಾನ ಮತ್ತು ಸರ್ಪದೋಷ ನಿವಾರಣೆಗಾಗಿ ಭಕ್ತರು ಕುಕ್ಕೆ, ಘಾಟಿಯಂತಹ ಸುಬ್ರಹ್ಮಣ್ಯ ದೇವಾಲಯಗಳಿಗೆ ಭೇಟಿ ನೀಡುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
Loading...
Unable to load recommendations.
Follow Us
