ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ

Updated on: Jun 29, 2025 | 6:49 AM

ಆಷಾಡ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದರ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಈ ದಿನಗಳಲ್ಲಿ ಪ್ರಕೃತಿಯ ಸ್ಥಿತಿ, ವಿಷ್ಣು ಶಯನ ಮತ್ತು ಸ್ತ್ರೀಶಕ್ತಿಯ ಪ್ರಾಬಲ್ಯದಿಂದಾಗಿ ಹಿರಿಯರು ಜಪ, ತಪ, ದೇವಿ ಆರಾಧನೆ ಮತ್ತು ದಾನಧರ್ಮಗಳಿಗೆ ಒತ್ತು ನೀಡುತ್ತಾರೆ. ಶುಭ ಕಾರ್ಯಗಳಿಗೆ ಅನಿವಾರ್ಯತೆ ಇದ್ದರೆ ಮಾತ್ರ ಮಾಡಬಹುದು.

ಬೆಂಗಳೂರು, ಜೂನ್​ 29: ಆಷಾಡ ಮಾಸವು ಹಿಂದೂ ಪಂಚಾಂಗದಲ್ಲಿ ವಿಶೇಷವಾದ ತಿಂಗಳಾಗಿದೆ. ಈ ತಿಂಗಳಲ್ಲಿ ಶುಭ ಕಾರ್ಯಗಳನ್ನು ಮಾಡುವುದನ್ನು ಕೆಲವರು ತಪ್ಪಿಸುತ್ತಾರೆ. ಇದಕ್ಕೆ ಹಲವು ಕಾರಣಗಳಿವೆ. ಪ್ರಕೃತಿಯಲ್ಲಿ ಈ ಸಮಯದಲ್ಲಿ ಮಳೆ ಹೆಚ್ಚಾಗಿರುತ್ತದೆ ಮತ್ತು ವಾತಾವರಣ ಬಿಗುವಾಗಿರುತ್ತದೆ. ರೈತಾಪಿ ವರ್ಗಕ್ಕೆ ಕೆಲಸ ಹೆಚ್ಚಾಗಿರುವುದರಿಂದಲೂ ಶುಭ ಕಾರ್ಯಗಳು ಕಡಿಮೆಯಾಗುತ್ತವೆ. ಆಧ್ಯಾತ್ಮಿಕವಾಗಿ, ವಿಷ್ಣು ಶಯನಾವಸ್ಥೆಯಲ್ಲಿರುವುದರಿಂದ ಅವರ ಪೂರ್ಣ ಆಶೀರ್ವಾದ ಸಿಗುವುದಿಲ್ಲ ಎಂದು ನಂಬಿಕೆ ಇದೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More