Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?

Updated on: Feb 11, 2026 | 7:08 AM

ಇದು ವಿನಮ್ರವಾಗಿ ದೈವದ ಮುಂದೆ ಶರಣಾಗುವ ಭಾವವನ್ನು ಪ್ರತಿಬಿಂಬಿಸುತ್ತದೆ. ಭರತನು ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆ ಇಟ್ಟು ಆಡಳಿತ ನಡೆಸಿದ ಉದಾಹರಣೆಯು ಪಾದರಕ್ಷೆಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ. ಗುರುಗಳ ಪಾದರಕ್ಷೆಗಳಿಗೆ ಪಾದುಕಾ ಪೂಜೆ ಸಲ್ಲಿಸುವುದು ಭಾರತೀಯ ಸಂಪ್ರದಾಯದಲ್ಲಿ ಶ್ರೇಷ್ಠವಾದುದು. ಪಾದರಕ್ಷೆಗಳ ದಾನವನ್ನು ಕೂಡ ಶುಭವೆಂದು ಪರಿಗಣಿಸಲಾಗುತ್ತದೆ. ಪಾದರಕ್ಷೆಗಳು ದೇಹದ ಶಕ್ತಿಯನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಸರಿಯಾಗಿ ಜೋಡಿಸುವುದು ಸಕಾರಾತ್ಮಕ ಶಕ್ತಿಯನ್ನು ಕಾಪಾಡುತ್ತದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಬೆಂಗಳೂರು, ಫೆಬ್ರವರಿ​ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ಅವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿವೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ.

ಇದು ವಿನಮ್ರವಾಗಿ ದೈವದ ಮುಂದೆ ಶರಣಾಗುವ ಭಾವವನ್ನು ಪ್ರತಿಬಿಂಬಿಸುತ್ತದೆ. ಭರತನು ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆ ಇಟ್ಟು ಆಡಳಿತ ನಡೆಸಿದ ಉದಾಹರಣೆಯು ಪಾದರಕ್ಷೆಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ. ಗುರುಗಳ ಪಾದರಕ್ಷೆಗಳಿಗೆ ಪಾದುಕಾ ಪೂಜೆ ಸಲ್ಲಿಸುವುದು ಭಾರತೀಯ ಸಂಪ್ರದಾಯದಲ್ಲಿ ಶ್ರೇಷ್ಠವಾದುದು. ಪಾದರಕ್ಷೆಗಳ ದಾನವನ್ನು ಕೂಡ ಶುಭವೆಂದು ಪರಿಗಣಿಸಲಾಗುತ್ತದೆ. ಪಾದರಕ್ಷೆಗಳು ದೇಹದ ಶಕ್ತಿಯನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಸರಿಯಾಗಿ ಜೋಡಿಸುವುದು ಸಕಾರಾತ್ಮಕ ಶಕ್ತಿಯನ್ನು ಕಾಪಾಡುತ್ತದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.