Daily Horoscope: ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ

Updated on: Jun 27, 2025 | 6:39 AM

ಜೂನ್ 27ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ ಮತ್ತು ಕರ್ಕಾಟಕ ರಾಶಿಯವರಿಗೆ ಆರ್ಥಿಕ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಏನು ಫಲಿತಾಂಶಗಳು ಕಾದಿವೆ ಎಂಬುದರ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸಹ ಸೂಚಿಸಲಾಗಿದೆ.

ಬೆಂಗಳೂರು, ಜೂನ್​ 26: ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಆಷಾಡ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಬಿದಿಗೆ, ಪುನರ್ವಸು ನಕ್ಷತ್ರ, ವ್ಯಾಗತ ಯೋಗ ಮತ್ತು ಕೌಲವ ಕರಣ ದಿನ. ರಾಹುಕಾಲ ಬೆಳಿಗ್ಗೆ 10:45 ರಿಂದ 12:21 ರವರೆಗೆ ಇದೆ. ಶುಭ ಕಾಲ ಮಧ್ಯಾಹ್ನ 12:22 ರಿಂದ 1:59 ರವರೆಗೆ ಇರುತ್ತದೆ. ಆಷಾಡ ಶುಕ್ರವಾರವಾಗಿರುವುದರಿಂದ ದೇವಿಯ ಪೂಜೆ ಮತ್ತು ಸ್ತುತಿಗೆ ವಿಶೇಷ ಮಹತ್ವವಿದೆ ಎಂದು ಡಾ. ಗುರೂಜಿ ಹೇಳಿದ್ದಾರೆ. ಕೆಂಪೇಗೌಡರ ಜಯಂತಿ ಮತ್ತು ಇತರ ಹಬ್ಬಗಳೂ ಈ ದಿನ ಆಚರಿಸಲ್ಪಡುತ್ತವೆ. ಚಂದ್ರನು ಕರ್ಕಾಟಕ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More