ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ

Edited By:

Updated on: May 11, 2026 | 6:11 PM

ಮಧ್ಯಪ್ರಾಚ್ಯ ಯುದ್ದದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಭೀತಿ ಉಂಟಾಗಿರುವ ನಡುವೆಯೇ, ಎಚ್ಚರಿಕೆಯ ನುಡಿಗಳನ್ನು ಆಡಿರುವ ಪ್ರಧಾನಿ ನರೇಂದ್ರ ಮೋದಿ, 'ಅಂತಾರಾಷ್ಟ್ರೀಯ ಸಂಘ ರ್ಷಗಳಿಂದ ಆಗುತ್ತಿರುವ ಬೆಲೆ ಏರಿಕೆಗಳನ್ನು ಎದುರಿಸಲು ಎಲ್ಲರಸಾಮೂಹಿಕ ಭಾಗೀದಾರಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸನ್ನಿಹಿತವಾಗಿದೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಮೋದಿ ಅವರ ಈ ಹೇಳಿಕೆ ನಾನಾ ರೀತಿಯ ಚರ್ಚೆಗಳು ಶುರುವಾಗಿದ್ದು, ಇದರ ಮಧ್ಯೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಟಿವಿ9 ಜೊತೆ ಮಾತನಾಡಿ, ಅಗತ್ಯ ವಸ್ತುಗಳ ಬಗ್ಗೆ ಬೆಲೆ ಏರಿಕೆಯಾಗಲಿದೆ ಎಂದಿದ್ದಾರೆ.

ಬೆಂಗಳೂರು, (ಮೇ 11):  ಮಧ್ಯಪ್ರಾಚ್ಯ ಯುದ್ದದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ (Petrol and diesel) ಬೆಲೆ ಏರಿಕೆಯ ಭೀತಿ ಉಂಟಾಗಿರುವ ನಡುವೆಯೇ, ಎಚ್ಚರಿಕೆಯ ನುಡಿಗಳನ್ನು ಆಡಿರುವ ಪ್ರಧಾನಿ ನರೇಂದ್ರ ಮೋದಿ, ‘ಅಂತಾರಾಷ್ಟ್ರೀಯ ಸಂಘ ರ್ಷಗಳಿಂದ ಆಗುತ್ತಿರುವ ಬೆಲೆ ಏರಿಕೆಗಳನ್ನು ಎದುರಿಸಲು ಎಲ್ಲರಸಾಮೂಹಿಕ ಭಾಗೀದಾರಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸನ್ನಿಹಿತವಾಗಿದೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಮೋದಿ ಅವರ ಈ ಹೇಳಿಕೆ ನಾನಾ ರೀತಿಯ ಚರ್ಚೆಗಳು ಶುರುವಾಗಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇದರ ಮಧ್ಯೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಟಿವಿ9 ಜೊತೆ ಮಾತನಾಡಿ, ಅಗತ್ಯ ವಸ್ತುಗಳ ಬಗ್ಗೆ ಬೆಲೆ ಏರಿಕೆಯಾಗಲಿದೆ ಎಂದಿದ್ದಾರೆ.

ಇದನ್ನೂ ನೋಡಿ: ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

Follow Us