ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ ಶೆಟ್ಟಿ

Updated on: Dec 17, 2025 | 10:44 AM

ತಮ್ಮಣ್ಣ ಶೆಟ್ಟಿ ಅವರು ರಿಷಬ್ ಶೆಟ್ಟಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅವರ ನಟನೆಯ ‘ಕಾಂತಾರ’ ಸಿನಿಮಾ ಬಂದ ಬಳಿಕ ಎಲ್ಲವೂ ಬದಲಾಯಿತು ಎಂಬುದು ಅವರ ಅಭಿಪ್ರಾಯ. ಈಗ ದೈವನರ್ತಕ ತಮಣ್ಣ ಶೆಟ್ಟಿ ಅವರು ಹೊಸ ವಿಷಯ ಹೇಳಿಕೊಂಡಿದ್ದಾರೆ. ರಿಷಬ್​ಗೆ ಇದುವೇ ತಿರುಗುಬಾಣ ಆಗುತ್ತದೆ ಎಂದು ಹೇಳಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ದೈವದ ವಿಷಯ ಹೇಳಲಾಗಿದೆ. ಈ ಬಗ್ಗೆ ಕೆಲವರಿಗ ಆಕ್ಷೇಪ ಇದೆ. ಇತ್ತೀಚೆಗೆ ರಿಷಬ್ ಅವರು ದೈವ ಕೋಲದಲ್ಲಿ ಭಾಗಿಯಾಗಿದ್ದರು. ಅದನ್ನು ನಿಯಮದ ಪ್ರಕಾರ ನಡೆಸಿಲ್ಲ ಎಂಬ ಆರೋಪ ಇದೆ. ಹೀಗಿರುವಾಗಲೇ ದೈವನರ್ತಕ ತಮ್ಮಣ್ಣ ಶೆಟ್ಟಿ ಅವರು ಒಂದು ಗಂಭೀರ ಭವಿಷ್ಯ ನುಡಿದಿದ್ದಾರೆ. ‘ದೈವ ಶಿಕ್ಷೆ ಕೊಡುವ ರೀತಿಯೇ ಬೇರೆ ಇದೆ. ನೀವು ಯಾವ ರೀತಿಯಲ್ಲಿ ತಪ್ಪು ಮಾಡಿದ್ದೀರಿ, ಶಿಕ್ಷೆ ಕೂಡ ಅದೇ ರೀತಿಯಲ್ಲಿ ಬರುತ್ತದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More