20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ

Edited By:

Updated on: Dec 09, 2025 | 8:26 PM

‘ಕಾಂತಾರ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ’ ಸಿನಿಮಾ (Kantara) ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ರೀತಿಯ ದೈವ ನರ್ತಕರು ಕಳೆದ 20 ವರ್ಷಗಳ ಹಿಂದೆಯೇ ದೈವಾರಾದನೆಯನ್ನು ವ್ಯಾಪಾರ ಮಾಡಿ ಆಗಿದೆ. ರಿಷಬ್ ಶೆಟ್ಟಿ (Rishab Shetty), ವಿಜಯ್ ಕಿರಗಂದೂರು ಅವರೆಲ್ಲ ಮೂರು, ನಾಲ್ಕು ವರ್ಷಗಳ ಹಿಂದೆ ಬಂದವರು. ಜನರು ಇಂಥ ಪರಿಸ್ಥಿತಿಯಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ. ಅಲ್ಲದ ಸಮಯದಲ್ಲಿ, ಪ್ರಾರ್ಥನೆ ಮಾಡದೇ, ಗ್ರಾಮ ದೈವಗಳ ಒಪ್ಪಿಗೆ ಇಲ್ಲದೇ ಆ ವ್ಯಕ್ತಿಯ ಮೇಲೆ ದರ್ಶನ ಬಂದಾಗಲೇ ಅಪನಂಬಿಕೆ ಎಂಬುದು ಗೊತ್ತಾಗಿದೆ’ ಎಂದು ತಮ್ಮಣ್ಣ ಶೆಟ್ಟಿ (Thammanna Shetty) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More