AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬೆಂಬಲಿಗರಿಂದ ಜೈಕಾರ ಮತ್ತು ಘೋಷಣೆಗಳು

ಮಹೇಶ್ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬೆಂಬಲಿಗರಿಂದ ಜೈಕಾರ ಮತ್ತು ಘೋಷಣೆಗಳು

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 21, 2025 | 11:38 AM

Share

ಮಹೇಶ್ ತಿಮರೋಡಿ ಮನೆಗೆ ಪೊಲೀಸರು ಬಂದಾಗ ವಕೀಲರು ಅವರೊಂದಿಗೆ ಚರ್ಚೆ ನಡೆಸಿದರು, ತಮ್ಮ ಕಕ್ಷಿದಾರನನ್ನು ತಾವೇ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತರುವುದಾಗಿ ಆವರು ಹೇಳಿದಾಗ ಪೊಲೀಸರು ಸಮ್ಮತಿಸಲಿಲ್ಲ. ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ ನಡೆಯುತ್ತಿದ್ದಾಗೆ ತಿಮರೋಡಿ ಮನೆಯಲ್ಲಿದ್ದರು. ಕೊನೆಗೆ ಪೊಲೀಸರು ಅರೆಸ್ಟ್ ವಾರಂಟ್ ಅನ್ನು ವಕೀಲರಿಗೆ ತೋರಿಸಿ ತಿಮರೋಡಿಯನ್ನು ತಮ್ಮೊಂದಿಗೆ ಕರೆದೊಯ್ದರು.

ಮಂಗಳೂರು, ಆಗಸ್ಟ್ 21: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ತಮ್ಮ ನಿವಾಸದಿಂದ ಮಹೇಶ್ ತಿಮರೋಡಿಯನ್ನು (Mahesh Timarodi) ಪೊಲೀಸರು ವಶಕ್ಕೆ ಪಡೆದು ವ್ಯಾನಲ್ಲಿ ತಮ್ಮೊಂದಿಗೆ ಕರೆದೊಯ್ದರು. ಪೊಲೀಸರು ತಿಮರೋಡಿ ಮನೆಗೆ ಬಂದಾಗ ಅಲ್ಲಿ ನೆರೆದಿದ್ದ ಬೆಂಬಲಿಗರು ಅವರ ಪರ ಘೋಷಣೆಗಳನ್ನು ಕೂಗಿದರು. ಹಿರಿಯ ಬಿಜೆಪಿ ನಾಯಕ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಅಂದರೆ ಬುಧವಾರ ತಿಮರೋಡಿಯವರು ಸಂತೋಷ್ ಸೇರಿದಂತೆ ಹಲವು ಜನರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು.

ಇದನ್ನೂ ಓದಿ:  ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತಿಲ, ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಸೇರಿ 36 ಜನರ ಗಡೀಪಾರಿಗೆ ಪ್ರಕ್ರಿಯೆ ಶುರು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ