AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ: ದೇವಸ್ಥಾನದಿಂದ ಎತ್ತಿ ಹೊರಹಾಕಿದ ಟ್ರಸ್ಟಿಗಳು

ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ: ದೇವಸ್ಥಾನದಿಂದ ಎತ್ತಿ ಹೊರಹಾಕಿದ ಟ್ರಸ್ಟಿಗಳು

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Apr 06, 2026 | 6:38 PM

Share

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ದಲಿತ ಸ್ವಾಮೀಜಿ ಬಂಡಿ ಬಾಲಕೃಷ್ಣ ಅವರಿಗೆ ಟ್ರಸ್ಟಿಗಳಿಂದ ಹಲ್ಲೆ ನಡೆದಿದೆ. ಜಾತಿ ಕಾರಣಕ್ಕೆ ಸ್ವಾಮೀಜಿಯನ್ನು ದೇಗುಲದಿಂದ ಹೊರಗೆ ಎಳೆದು ಥಳಿಸಲಾಗಿದ್ದು, ಜಾತಿ ನಿಂದನೆ ಆರೋಪ ಕೇಳಿಬಂದಿದೆ. ಏಳೆಂಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸ್ವಾಮೀಜಿ ಮೇಲೆ ಇದೇ ಮೊದಲಲ್ಲ. ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ, ಏಪ್ರಿಲ್​ 06: ದಲಿತ ಎಂಬ ಕಾರಣಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಮಾಡಿ, ದೇಗುಲದಿಂದ ಹೊರಗೆ ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ನಡೆದಿದೆ. ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ಟ್ರಸ್ಟಿಗಳಿಂದ ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬುವರನ್ನು ಎಳೆದಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ವಾಮೀಜಿ ಕಳೆದ 7-8 ವರ್ಷಗಳಿಂದ ದೇವಸ್ಥಾನದಲ್ಲಿ ನೆಲೆಸಿ ಸೇವೆ ಸಲ್ಲಿಸುತ್ತಿದ್ದರು. ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು ಎಂದು ನಿಂದಿಸಿ ಹಲವು ಬಾರಿ ಹಲ್ಲೆ ಮಾಡಿದ್ದಾರೆ. ಟ್ರಸ್ಟ್​ನ ಕಾರ್ಯದರ್ಶಿ ಶಿವಯ್ಯ ಮತ್ತು ಪುತ್ರ ಸುಮನ್ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 06, 2026 06:37 PM
Follow Us