ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ದರ್ಶನ್ ಅವರು ರೇಣುಕಾಸ್ವಾಮಿಯನ್ನು ಕೊಲೆ ಮಾಡಿದರು ಎನ್ನಲಾಗಿದೆ. ದರ್ಶನ್ ಜೊತೆ ಇನ್ನೂ ಹಲವರು ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್ ಸದ್ಯ ಕೇಂದ್ರ ಕಾರಾಗೃಹದಲ್ಲಿದ್ದಾರೆ. ದರ್ಶನ್ ಕೇಸ್ ಬಗ್ಗೆ ಕೆಲವರು ಅಭಿಪ್ರಾಯ ಹಂಚಿಕೊಂಡರೆ ಇನ್ನೂ ಕೆಲವರು ಮೌನವಹಿಸಿದ್ದಾರೆ. ಸಂಗೀತ ಸಂಯೋಜಕ ವಿ. ಮನೋಹರ್ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ‘ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು’ ಎಂದಿದ್ದಾರೆ ಮನೋಹರ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.