ದುಬೈಗೆ ತೆರಳಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ದರ್ಶನ್​-ವಿಜಯಲಕ್ಷ್ಮಿ

|

Updated on: May 20, 2024 | 9:58 PM

ನಟ ದರ್ಶನ್​ ಅವರು ಸಿನಿಮಾ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ದುಬೈಗೆ ತೆರಳಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜತೆ ಅವರು ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ದರ್ಶನ್​ ಮತ್ತು ವಿಜಯಲಕ್ಷ್ಮಿ ದಂಪತಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಆಪ್ತರು ಶುಭಾಶಯ ತಿಳಿಸಿದ್ದಾರೆ. ಫೋಟೋಗಳು ವೈರಲ್​ ಆಗಿವೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ಅವರು ‘ಡೆವಿಲ್​: ದಿ ಹೀರೋ’ ಸಿನಿಮಾದ ಕೆಲಸಗಳ ನಡುವೆ ಬಿಡುವು ಪಡೆದ ದುಬೈಗೆ ತೆರಳಿದ್ದಾರೆ. ಅಲ್ಲಿ ಅವರು ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದರ್ಶನ್​ ಹಾಗೂ ವಿಜಯಲಕ್ಷ್ಮಿ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರು ವೆಡ್ಡಿಂಗ್​ ಆ್ಯನಿವರ್ಸರಿಯ ಶುಭಾಶಯ ಕೋರಿದ್ದಾರೆ. ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಅವರು ಕೋಪ ಹೊರಹಾಕಿದ್ರಾ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ದರ್ಶನ್ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ಕರ್ಮದ ಬಗ್ಗೆ ಮಾತಾಡಿರೋ ವೈರಲ್ ವಿಡಿಯೋವನ್ನು ಈಗ ಪವಿತ್ರಾ ಗೌಡ (Pavithra Gowda) ಶೇರ್ ಮಾಡಿ ‘ಕರ್ಮ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಈ ವಿಡಿಯೋ ಮತ್ತು ಕ್ಯಾಪ್ಷನ್​ನ ಸೀಕ್ರೆಟ್​ ಏನು ಎಂಬ ಕುತೂಹಲ ಹುಟ್ಟುಕೊಂಡಿದೆ. ಕೆಲವು ದಿನಗಳ ಹಿಂದೆ ಸೋಶಿಯಲ್​ ಮೀಡಿಯಾದಲ್ಲಿ ಪವಿತ್ರಾ ಹಾಗೂ ವಿಜಯಲಕ್ಷ್ಮಿ ನಡುವೆ ವಾರ್ ಆಗಿತ್ತು. ಆ ಮುನಿಸು ಇನ್ನೂ ಕಡಿಮೆ ಆದಂತಿಲ್ಲ. ಇಂದು (ಮೇ 20) ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ಲ್ಲಿ ಸ್ಟೋರಿ ಶೇರ್ ಮಾಡಿದ 1 ಗಂಟೆ ನಂತರ ಪವಿತ್ರಾ ಅವರು ಕರ್ಮದ ವಿಡಿಯೋ ಶೇರ್ ಮಾಡಿದ್ದಾರೆ. ಇದರಿಂದ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on