AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಕೇಸ್​ನಲ್ಲಿ ಕೋರ್ಟ್​ಗೆ ಹಾಜರಾದ ದರ್ಶನ್; ವಿಚಾರಣೆ ಸೆಪ್ಟೆಂಬರ್​ಗೆ ಮುಂದೂಡಿಕೆ

ಕೊಲೆ ಕೇಸ್​ನಲ್ಲಿ ಕೋರ್ಟ್​ಗೆ ಹಾಜರಾದ ದರ್ಶನ್; ವಿಚಾರಣೆ ಸೆಪ್ಟೆಂಬರ್​ಗೆ ಮುಂದೂಡಿಕೆ

ರಾಜೇಶ್ ದುಗ್ಗುಮನೆ
|

Updated on: Aug 12, 2025 | 11:38 AM

Share

ದರ್ಶನ್ ಮತ್ತು ಇನ್ನೂ 16 ಮಂದಿ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈಗ ಈ ಪ್ರಕರಣದಲ್ಲಿ ದರ್ಶನ್ ಅವರು ಕೋರ್ಟ್​ಗೆ ಹಾಜರಿ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿ ಇದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ (Darshan) ಹಾಗೂ ಅವರ ಗ್ಯಾಂಗ್ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್​ಗೆ ಹಾಜರಿ ಹಾಕಿದೆ. ಕೋರ್ಟ್​ಗೆ ದರ್ಶನ್, ಪವಿತ್ರಾ ಹಾಗೂ ಇತರರು ಆಗಮಿಸಿದ್ದಾರೆ. ಇಂದಿನ ವಿಚಾರಣೆ ತುಂಬಾನೇ ಮಹತ್ವದ್ದಾಗಲಿದೆ. ಎಲ್ಲಾ ಆರೋಪಿಗಳು ಹಾಜಾರಾದರೆ ಇಂದೇ ಚಾರ್ಜಸ್ ಫ್ರೇಮ್ ಮಾಡುವ ಸಾದ್ಯತೆ ಇತ್ತು.  ಆದರೆ,  ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್  ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು  ನಿಗದಿ ಪಡಿಸಲಾಗಿದೆ.  ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಹಾಜರು ಇರಬೇಕು ಎಂದು ನಿರ್ದೇಶಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More