ರೇಣುಕಾ ಸ್ವಾಮಿ ಕೊಲೆಯಾದ ಶೆಡ್​ಗೆ ಬಂದಿತ್ತು ದರ್ಶನ್​ ಕಾರು; ಸಿಸಿಟಿವಿ ದೃಶ್ಯ ಲಭ್ಯ

|

Updated on: Jun 11, 2024 | 5:41 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್​ ಬಂಧನವಾಗಿದ್ದು ಪೊಲೀಸರು ಹಲವು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಶೆಡ್​ಗೆ ಕರೆದುಕೊಂಡು ಹೋಗಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿತ್ತು. ಅಂದು ರಾತ್ರಿ ಅದೇ ಶೆಡ್​ಗೆ ದರ್ಶನ್​ ಕಾರು ಸಹ ಬಂದಿತ್ತು ಎಂಬುದಕ್ಕೆ ಈಗ ಸಾಕ್ಷಿ ಸಿಕ್ಕಿದೆ. ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ.

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್​ (Darshan) ಈಗ ದೊಡ್ಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್​ ಅರೆಸ್ಟ್​ ಆಗಿದ್ದು ಪೊಲೀಸರು ವಿವಿಧ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿಯನ್ನು ಶೆಡ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿತ್ತು. ಅದೇ ಶೆಡ್​ಗೆ ಅಂದು ರಾತ್ರಿ ದರ್ಶನ್​ ಅವರ ಕಾರು ಕೂಡ ಬಂದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಈ ಪ್ರಕರಣದಲ್ಲಿ ದರ್ಶನ್​ ಜೊತೆ ಪವಿತ್ರಾ ಗೌಡ (Pavithra Gowda) ಸೇರಿದ ಒಟ್ಟು 13 ಜನರ ಬಂಧನ ಆಗಿದೆ. ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕೋರ್ಟ್​ಗೆ ಹಾಜರುಪಡಿಸಲಾಗುವುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on