AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ

ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ

ಮದನ್​ ಕುಮಾರ್​
|

Updated on:May 25, 2026 | 3:56 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ (Darshan) ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ. ದರ್ಶನ್ ಅವರು ಜೈಲು ಸೇರಿ ಹಲವು ತಿಂಗಳು ಕಳೆದಿದೆ. ಇನ್ನೊಂದು ವರ್ಷ ಜಾಮೀನು (Bail) ಸಿಗಲ್ಲ ಎಂಬ ವಿಚಾರದಿಂದ ಅವರಿಗೆ ಚಿಂತೆ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಅವರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಒಂದು ವರ್ಷದ ಒಳಗೆ ವಿಚಾರಣೆ ಮುಗಿಸಬೇಕು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಪ್ರತಿಯನ್ನು ವಕೀಲರು ಸೆಷನ್ಸ್ ಕೋರ್ಟ್​ಗೆ ಸಲ್ಲಿಸಿದ್ದಾರೆ. ಪ್ರತಿ ದಿನ ಅಥವಾ ವಾರದಲ್ಲಿ 4 ದಿನ ವಿಚಾರಣೆ ನಡೆಸುವ ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 24, 2026 02:07 PM

Follow Us