ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ

Updated on: May 25, 2026 | 3:56 PM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ (Darshan) ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ. ದರ್ಶನ್ ಅವರು ಜೈಲು ಸೇರಿ ಹಲವು ತಿಂಗಳು ಕಳೆದಿದೆ. ಇನ್ನೊಂದು ವರ್ಷ ಜಾಮೀನು (Bail) ಸಿಗಲ್ಲ ಎಂಬ ವಿಚಾರದಿಂದ ಅವರಿಗೆ ಚಿಂತೆ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ಅವರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಒಂದು ವರ್ಷದ ಒಳಗೆ ವಿಚಾರಣೆ ಮುಗಿಸಬೇಕು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಪ್ರತಿಯನ್ನು ವಕೀಲರು ಸೆಷನ್ಸ್ ಕೋರ್ಟ್​ಗೆ ಸಲ್ಲಿಸಿದ್ದಾರೆ. ಪ್ರತಿ ದಿನ ಅಥವಾ ವಾರದಲ್ಲಿ 4 ದಿನ ವಿಚಾರಣೆ ನಡೆಸುವ ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 24, 2026 02:07 PM
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More