ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?

Updated on: Aug 22, 2024 | 8:06 AM

ನಟ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ದಿನದಿಂದ ದಿನಕ್ಕೆ ಅವರಿಗೆ ಸಂಕಷ್ಟ ಹೆಚ್ಚಾಗುತ್ತಿದೆ. ರೇಣುಕಾ ಸ್ವಾಮಿ ಮರ್ಡರ್​ ಕೇಸ್​ನಲ್ಲಿ ದರ್ಶನ್​ ಎರಡನೇ ಆರೋಪಿ ಆಗಿದ್ದಾರೆ. ಈವರೆಗೆ ಪ್ರಕರಣದ ತನಿಖೆಗೆ ಪೊಲೀಸರು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ.

ನಟ ದರ್ಶನ್ ಅವರ ಪ್ರಕರಣದ ತನಿಖೆ ಭರದಿಂದ ಸಾಗುತ್ತಿದೆ. ಶೀಘ್ರವೇ ಪೊಲೀಸರು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಅಲ್ಲಿವರೆಗೆ ದರ್ಶನ್​ಗೆ ಜೈಲೇ ಗತಿ ಆಗಲಿದೆ. ಆ ಬಳಿಕ ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಈ ಮಧ್ಯೆ ದರ್ಶನ್ ಅವರನ್ನು ಎ2 ಆರೋಪಿ ಸ್ಥಾನದಿಂದ ಎ1 ಆರೋಪಿಯನ್ನಾಗಿ ಮಾಡಲು ಸಿದ್ಧತೆ ನಡೆದಿದೆ. ಈವರೆಗೆ ಪ್ರಕರಣದ ತನಿಖೆಗೆ ಎಷ್ಟು ಹಣ ಖರ್ಚಾಗಿದೆ ಎಂಬ ಮಾಹಿತಿ ಸಿಕ್ಕಿದೆ. ತನಿಖೆಗೆ ಈವರೆಗೆ 2 ಲಕ್ಷದ 50 ಸಾವಿರ ರೂಪಾಯಿ ಖರ್ಚಾಗಿದೆ. ಈ ಹಣವನ್ನು ಸರ್ಕಾರ ಪೊಲೀಸರಿಗೆ ಪಾವತಿ ಮಾಡಿರಲಿಲ್ಲ. ಈ ಬಗ್ಗೆ ಟಿವಿ9 ಕನ್ನಡ ವರದಿ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರೋ ಸರ್ಕಾರ ಬಿಲ್​ಗಳನ್ನು ಕ್ಲಿಯರ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More