ದರ್ಶನ್ ತಪ್ಪು ಮಾಡಿರದಿದ್ದರೆ ಜೈಲಿಗೆ ಯಾಕೆ ಹೋಗುತ್ತಿದ್ದರು? ಜಮೀರ್ ಅಹ್ಮದ್, ಸಚಿವ

Updated on: Sep 03, 2024 | 2:38 PM

ಕೊಲೆ ಆರೋಪಿ ದರ್ಶನ್ ಮತ್ತು ಸಚಿವ ಜಮೀರ್ ಅಹ್ಮದ್ ನಡುವಿನ ಗೆಳೆತನದ ಹಿನ್ನೆಲೆಯಲ್ಲೇ ನಟನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಂದಹಾಗೆ, ಜಮೀರ್ ಅಹ್ಮದ್ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಕೂಡ ಹೌದು!

ಹಾವೇರಿ: ದರ್ಶನ್ ಬಳ್ಳಾರಿ ಸೆರೆವಾಸದ ಜೊತೆ ತಮ್ಮ ಹೆಸರು ಯಾಕೆ ಥಳುಕು ಹಾಕಿಕೊಳ್ಳುತ್ತಿದೆಯೋ ಗೊತ್ತಿಲ್ಲ, ಅವರ ಮತ್ತು ತನ್ನ ನಡುವೆ ಆತ್ಮೀಯ ಸ್ನೇಹವಿದೆ, ಇಲ್ಲ ಅಂತ ಹೇಳಲ್ಲ, ಆದರೆ ಅದೇ ಕಾರಣಕ್ಕೆ ಅವರೊಂದಿಗೆ ತನ್ನ ಹೆಸರು ಸೇರಿಸುವುದು ಸರಿಯಲ್ಲ ಎಂದು ಸಚಿವ ಬಿಜೆಡ್ ಜಮೀರ್ ಅಹ್ಮದ್ ಹೇಳಿದರು. ಅವರಿಂದ ತಪ್ಪಾಗಿರಬಹುದಾ ಎಂದು ಕೇಳಿದ ಪ್ರಶ್ನೆಗೆ ಸಚಿವ, ತಪ್ಪು ಮಾಡಿರದಿದ್ದರೆ ಜೈಲಿಗೆ ಯಾಕೆ ಹೋಗ್ತಾರೆ ಅಂತ ಮಾರ್ಮಿಕವಾಗಿ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಖಾನ್ ಗೆ ಶಾಸಕ ಎನ್ ಹೆಚ್ ಕೋನರೆಡ್ಡಿ ಮನೆಯಲ್ಲಿ ಭರ್ಜರಿ ಔತಣ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More