‘ದರ್ಶನ್ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್
ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ದರ್ಶನ್ ಅವರಿಗೆ ಜಾಮೀನು ನೀಡಲಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಅವರು ಮಾತನಾಡಿದ್ದಾರೆ. ದರ್ಶನ್ ಅವರ ಆರೋಗ್ಯದ ಬಗ್ಗೆ ಸುಮಲತಾ ಅಪ್ಡೇಟ್ ನೀಡಿದ್ದಾರೆ. ದರ್ಶನ್ಗೆ ಸರ್ಜರಿ ಇಷ್ಟ ಇಲ್ಲ ಎಂಬ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ.
ಸುಮಲತಾ ಅಂಬರೀಷ್ ಹಾಗೂ ದರ್ಶನ್ ಅವರ ನಡುವೆ ಉತ್ತಮ ಒಡನಾಟ ಇದೆ. ಈಗ ಬೆನ್ನು ನೋವಿಗೆ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಕುರಿತು ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ‘ಬೆನ್ನು ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಅಂತ ನಾನು ಕೇಳ್ಪಟ್ಟೆ. ಯಾಕೆಂದರೆ, ಸರ್ಜರಿ ಮಾಡಿದರೆ ರಿಕವರಿ ಸಮಯ ತುಂಬ ಇರುತ್ತೆ. ಶೂಟಿಂಗ್ ಅರ್ಧಕ್ಕೆ ನಿಂತಿದೆ. ಇದು ಸಿನಿಮಾ ಇಂಡಸ್ಟ್ರಿ ನಷ್ಟ ಎದುರಿಸುತ್ತಿರುವ ಸಂದರ್ಭ. ಹೆಚ್ಚಿನ ಮಾಹಿತಿ ಇಲ್ಲ. ದರ್ಶನ್ ಕೈಯಲ್ಲಿ ಫೋನ್ ಇಲ್ಲ. ಅವರ ಪತ್ನಿ ಜೊತೆ ನಾವು ಸಂಪರ್ಕ ಮಾಡಬೇಕು ಅಷ್ಟೇ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
