ದರ್ಶನ್ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು ಮನೆ ಸ್ವಚ್ಛಗೊಳಿಸುತ್ತಿರುವ ಮನೆಗೆಲಸದವರು

ಅರುಣ್​ ಕುಮಾರ್​ ಬೆಳ್ಳಿ

Updated on: Oct 30, 2024 | 12:47 PM

ದರ್ಶನ್ ಗೆ ಬೆನ್ನುನೋವಿನ ಚಿಕಿತ್ಸೆಗಾಗಿ ಜಾಮೀನು ಸಿಕ್ಕಿದೆ. ಹಾಗಾಗಿ, ಅವರ ಮನೆಗೆ ಬಂದರೂ ಒಂದೆರಡು ದಿನಗಳಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಲಿದ್ದಾರೆ. ಐದು ತಿಂಗಳಿಂದ ಜೈಲಲ್ಲಿದ್ದ ನಟನಿಗೆ ಚಿಕಿತ್ಸೆ ಅವಧಿಯಲ್ಲಿ ಆಸ್ಪತ್ರೆ ಕೂಡ ಬಂಧಿಖಾನೆಯಾಗಿ ಕಾಣಲಿದೆ. ಅವರು ಶಸ್ತ್ರಚಿಕಿತ್ಸೆಗೊಳಗಾಗುವ ಸಾಧ್ಯತೆ ಇದೆ.

ಬೆಂಗಳೂರು: ಹೈಕೋರ್ಟ್​ನಿಂದ ಆರುವಾರ ಅವಧಿಯ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್ ಮನೆಯಲ್ಲಿ ಹಬ್ಬದ ವಾತಾವರಣ ಇಮ್ಮಡಿಸಿದೆ. ನಾಳೆ ದೀಪಾವಳಿ ಹಬ್ಬ ಮತ್ತ್ತು ಇವತ್ತು ದರ್ಶನ್ ಮನೆಗೆ ಬರುತ್ತಿದ್ದಾರೆ. ಅವರನ್ನು ಇವತ್ತೇ ಬಿಡುಗಡೆ ಮಾಡಲಾಗುತ್ತೋ ಅಂತ ಖಚಿತಪಟ್ಟಿಲ್ಲ ಅದರೆ ನಗರದಲ್ಲಿರುವ ಅವರ ಮನೆಯನ್ನು ಸ್ವಚ್ಛಗೊಳಿಸುವ ಕೆಲಸ ಆರಂಭವಾಗಿದೆ. ಮನೆಗೆ ಬರುವ ಮೊದಲು ಅವರು ದೇವಸ್ಥಾನಕ್ಕೆ ಹೋಗಲಿದ್ದಾರಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ಜಾಮೀನು: ನೋವಿನಲ್ಲೂ ಘನತೆ ಮೆರೆದ ರೇಣುಕಾ ಸ್ವಾಮಿ ತಂದೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.