ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ
ಜೈಲು ಊಟ ಸೇವಿಸಿದ್ದರಿಂದ ದರ್ಶನ್ ಅವರಿಗೆ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದನ್ನು ನ್ಯಾಯಾಲಯಕ್ಕೆ ವಕೀಲರು ವಿವರಿಸಿದ್ದರು. ಆ ಬಗ್ಗೆ ತಪಾಸಣೆ ನಡೆಸುವಂತೆ ಜೈಲಿನ ವೈದ್ಯರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ವೈದ್ಯರು ನೀಡುವ ವರದಿಯ ಆಧಾರದ ಮೇಲೆ ದರ್ಶನ್ಗೆ ಮನೆ ಊಟ ತರಿಸಲು ಕೋರ್ಟ್ ಅನುಮತಿ ನೀಡುತ್ತಾ ಎಂಬ ಕೌತುಕ ಮೂಡಿದೆ.
ಹೊರಗಡೆ ಇದ್ದಾಗ ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ನಡೆಸಿದ ದರ್ಶನ್ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಪ್ರಮುಖವಾಗಿ ಜೈಲಿನ ಊಟದಿಂದ ದರ್ಶನ್ಗೆ ತೊಂದರೆ ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ. ಜೈಲು ಊಟ ಸೇವಿಸಿದ್ದರಿಂದ ದರ್ಶನ್ಗೆ ಲೂಸ್ ಮೋಷನ್ ಶುರುವಾಗಿದೆ. ದೇಹದ ತೂಕ ಕಡಿಮೆ ಆಗುತ್ತಿದೆ. ಫಿಟ್ನೆಸ್ ಕೂಡ ಹಾಳಾಗುತ್ತಿದೆ. ಮನೆ ಊಟ ಸೇವಿಸಿದರೆ ಈ ಸಮಸ್ಯೆ ಸರಿ ಆಗಬಹುದು ಎಂಬ ಕಾರಣದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೈಲಿನ ವೈದ್ಯರು ನೀಡುವ ವರದಿ ಆಧಾರದ ಮೇಲೆ ನ್ಯಾಯಾಲಯ ಮುಂದಿನ ಸೂಚನೆ ನೀಡಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
