ಜೈಲು ಊಟದಿಂದ ದರ್ಶನ್ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ
ಜೈಲು ಊಟ ಸೇವಿಸಿದ್ದರಿಂದ ದರ್ಶನ್ ಅವರಿಗೆ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದನ್ನು ನ್ಯಾಯಾಲಯಕ್ಕೆ ವಕೀಲರು ವಿವರಿಸಿದ್ದರು. ಆ ಬಗ್ಗೆ ತಪಾಸಣೆ ನಡೆಸುವಂತೆ ಜೈಲಿನ ವೈದ್ಯರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ವೈದ್ಯರು ನೀಡುವ ವರದಿಯ ಆಧಾರದ ಮೇಲೆ ದರ್ಶನ್ಗೆ ಮನೆ ಊಟ ತರಿಸಲು ಕೋರ್ಟ್ ಅನುಮತಿ ನೀಡುತ್ತಾ ಎಂಬ ಕೌತುಕ ಮೂಡಿದೆ.
ಹೊರಗಡೆ ಇದ್ದಾಗ ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ನಡೆಸಿದ ದರ್ಶನ್ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಪ್ರಮುಖವಾಗಿ ಜೈಲಿನ ಊಟದಿಂದ ದರ್ಶನ್ಗೆ ತೊಂದರೆ ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ. ಜೈಲು ಊಟ ಸೇವಿಸಿದ್ದರಿಂದ ದರ್ಶನ್ಗೆ ಲೂಸ್ ಮೋಷನ್ ಶುರುವಾಗಿದೆ. ದೇಹದ ತೂಕ ಕಡಿಮೆ ಆಗುತ್ತಿದೆ. ಫಿಟ್ನೆಸ್ ಕೂಡ ಹಾಳಾಗುತ್ತಿದೆ. ಮನೆ ಊಟ ಸೇವಿಸಿದರೆ ಈ ಸಮಸ್ಯೆ ಸರಿ ಆಗಬಹುದು ಎಂಬ ಕಾರಣದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೈಲಿನ ವೈದ್ಯರು ನೀಡುವ ವರದಿ ಆಧಾರದ ಮೇಲೆ ನ್ಯಾಯಾಲಯ ಮುಂದಿನ ಸೂಚನೆ ನೀಡಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ

ಕಮಲ್ ಹಾಸನ್ ವಿವಾದ, ಬಂದ್ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ

ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??

ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
