‘ದರ್ಶನ್ ರಿಲೀಸ್ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಿಂದ ಆದಷ್ಟು ಬೇಗ ಹೊರಗೆ ಬರಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಕೆಲವರು ದೇವರ ಬಳಿ ಈ ಕುರಿತು ಪ್ರಶ್ನೆ ಕೇಳಿದ್ದಾರೆ. ದೇವರ ವಿಗ್ರಹದ ಮೇಲಿನ ಹೂವು ಪ್ರಸಾದ ರೂಪದಲ್ಲಿ ಬಿದ್ದಿದೆ. ಅಂದರೆ, ದರ್ಶನ್ ಅವರು ರಿಲೀಸ್ ಆಗುತ್ತಾರೆ ಎಂಬ ಸೂಚನೆ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈವಿಡಿಯೋ ವೈರಲ್ ಆಗಿದೆ.
ಕೊಲೆ ಕೇಸ್ನಲ್ಲಿ ಆರೋಪಿ ಆಗಿರುವ ದರ್ಶನ್ (Darshan) ಈಗ ಜೈಲಿನಲ್ಲಿ ಇದ್ದಾರೆ. ಅವರು ಬಿಡುಗಡೆ ಆಗಬೇಕು ಎಂಬುದು ಅಭಿಮಾನಿಗಳ (Darshan Fans) ಬಯಕೆ. ಅದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಈಗ ವೈರಲ್ ಆಗಿದೆ. ದರ್ಶನ್ ರಿಲೀಸ್ ಆಗುತ್ತಾರೋ ಇಲ್ಲವೋ ಎಂಬ ಪ್ರಶ್ನೆಯನ್ನು ಪೂಜಾರಿ ಮೂಲಕ ದೇವರ ಮುಂದೆ ಇಡಲಾಗಿದೆ. ‘ನೋಡಪ್ಪ.. ಈ ವಿಷಯನಾ ಕೇಳಬೇಕೋ ಅಥವಾ ಕೇಳಬಾರದೋ ಗೊತ್ತಿಲ್ಲ. ಆದರೆ ಅಭಿಮಾನಿಗಳ ಪರವಾಗಿ ವರ ಕೇಳ್ತಾ ಇದ್ದೇನೆ. ದರ್ಶನ್ ಅಂತಾ ಒಬ್ಬರು ಕಲಾವಿದರು ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾರೆ. ಎಲ್ಲಾ ಸಮಸ್ಯೆ ನಿವಾರಣೆ ಆಗಿ ಅವರು ಮತ್ತೆ ಅಭಿಮಾನಿಗಳನ್ನು ಸೇರುತ್ತಾರೆ ಎಂಬುದಾದರೆ ಆಶೀರ್ವಾದ ಮಾಡು’ ಎಂದು ಪೂಜಾರಿ ವರ ಕೇಳುತ್ತಿದ್ದಂತೆಯೇ ದೇವರ ಮೇಲಿದ್ದ ಹೂವಿನ ಹಾರ ಕೆಳಗೆ ಬಿದ್ದಿದೆ. ದರ್ಶನ್ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

