ಊಟ, ನಿದ್ರೆ, ಕೆಲಸ ಬಿಟ್ಟು ದರ್ಶನ್​ಗಾಗಿ ಜೈಲಿನ ಹೊರಗೆ ಕಾದಿರುವ ಅಭಿಮಾನಿಗಳು

ಕೊಲೆ ಆರೋಪ ಹೊತ್ತಿರುವ ದರ್ಶನ್​, ಪವಿತ್ರಾ ಗೌಡ ಮುಂತಾದವರು ಜೈಲು ಸೇರಿದ್ದಾರೆ. ಅವರನ್ನು ನೋಡಲು ರಾಯಚೂರಿನಿಂದ ಕೆಲವು ಅಭಿಮಾನಿಗಳು ಬಂದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಹೊರಗೆ ನಿಂತು ಇವರೆಲ್ಲ ಕಾಯುತ್ತಿದ್ದಾರೆ. ದರ್ಶನ್​ರನ್ನು ನೋಡಬೇಕು ಎಂದು ಕೆಲಸ ಬಿಟ್ಟು, ಸರಿಯಾಗಿ ಊಟ, ನಿದ್ರೆ ಕೂಡ ಮಾಡದೇ ಫ್ಯಾನ್ಸ್​ ಕಾಯುತ್ತಿದ್ದಾರೆ.

ಊಟ, ನಿದ್ರೆ, ಕೆಲಸ ಬಿಟ್ಟು ದರ್ಶನ್​ಗಾಗಿ ಜೈಲಿನ ಹೊರಗೆ ಕಾದಿರುವ ಅಭಿಮಾನಿಗಳು
| Updated By: ಮದನ್​ ಕುಮಾರ್​

Updated on: Jun 23, 2024 | 6:32 PM

ನಟ ದರ್ಶನ್​ (Darshan) ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಎಲ್ಲ ಊರುಗಳಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಪ್ರತಿ ವರ್ಷ ದರ್ಶನ್​ ಹುಟ್ಟುಹಬ್ಬದ ದಿನ ಅವರನ್ನು ನೋಡಲು ಬೇರೆ ಬೇರೆ ಊರುಗಳಿಂದ ಅಭಿಮಾನಿಗಳು ಬರುತ್ತಿದ್ದರು. ಆದರೆ ಈಗ ಅವರನ್ನು ನೋಡಲು ಅಭಿಮಾನಿಗಳು ದೂರದ ಊರುಗಳಿಂದ ಬಂದು ಜೈಲಿನ ಎದುರು ಕಾಯುವಂತಾಗಿದೆ. ರೇಣುಕಾ ಸ್ವಾಮಿ (Renuka Swamy) ಎಂಬಾತನ ಕೊಲೆ ಆರೋಪದಲ್ಲಿ ದರ್ಶನ್​ ಜೈಲು ಸೇರಿರುವುದು ಅಭಿಮಾನಿಗಳು ಹಾಗೂ ಆಪ್ತರಿಗೆ ನೋವುಂಟುಮಾಡಿದೆ. ರಾಯಚೂರಿನಿಂದ ಬಂದಿರುವ ಕೆಲವು ಅಭಿಮಾನಿಗಳು (Darshan Fans) ಪರಪ್ಪನ ಅಗ್ರಹಾರ ಜೈಲಿನ ಹೊರಗೆ ನಿಂತು ತಮ್ಮ ನೆಚ್ಚಿನ ನಟನಿಗಾಗಿ ಕಾಯುತ್ತಿದ್ದಾರೆ. ಕೆಲಸ ಬಿಟ್ಟು ಸರಿಯಾಗಿ ಊಟ, ನಿದ್ರೆಯೂ ಮಾಡದೇ ಜೈಲಿನ ಹೊರಗೆ ಕಾಯುತ್ತಿದ್ದಾರೆ. ‘ದರ್ಶನ್​ ಅವರನ್ನು ನೋಡಿಕೊಂಡೇ ಹೋಗುತ್ತೇವೆ’ ಎಂದು ಈ ಅಭಿಮಾನಿಗಳು ಪಟ್ಟು ಹಿಡಿದ್ದಿದ್ದಾರೆ. ದರ್ಶನ್​ ಜೊತೆ ಪವಿತ್ರಾ ಗೌಡ ಸೇರಿ ಅನೇಕರು ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು