‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್; ದಾಸನ ಪ್ರತಿಕ್ರಿಯೆ ನೋಡಿ..
ಜಾಮೀನು ಸಿಗುವ ನಿರೀಕ್ಷೆಯಲ್ಲಿ ನಟ ದರ್ಶನ್ ಅವರನ್ನು ನೋಡಲು ಬಳ್ಳಾರಿ ಜೈಲಿನ ಎದುರು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ದರ್ಶನ್ ನಡೆದು ಬರುವಾಗ ಫ್ಯಾನ್ಸ್ ಹಲವಾರು ರೀತಿಯಲ್ಲಿ ಜೈಕಾರ ಹಾಕಿದರು. ‘ದೇವರು ಬಂದ್ರು, ಹುಲಿ ಬಂತು’ ಎಂಬಿತ್ಯಾದಿಯಾಗಿ ತಮ್ಮ ನೆಚ್ಚಿನ ನಟನ ಗುಣಗಾನ ಮಾಡಿದರು. ಆ ವಿಡಿಯೋ ಇಲ್ಲಿದೆ ನೋಡಿ..
ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು (ಸೆಪ್ಟೆಂಬರ್ 30) ಆಗಮಿಸಿದ್ದರು. ಸೆಲ್ನಿಂದ ವೀಕ್ಷಕರ ಕೊಠಡಿಗೆ ಬರುವಾಗ ದರ್ಶನ್ ಅವರನ್ನು ನೋಡಿ ಫ್ಯಾನ್ಸ್ ಜೈಕಾರ ಹಾಕಿದ್ದಾರೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದ ದರ್ಶನ್ಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ಅಕ್ಟೋಬರ್ 4ಕ್ಕೆ ಮುಂದೂಡಿಕೆ ಆಗಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರೇ ಮನವಿ ಮಾಡಿದ ಕಾರಣ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಯಿತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
