ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು (ಸೆಪ್ಟೆಂಬರ್ 30) ಆಗಮಿಸಿದ್ದರು. ಸೆಲ್ನಿಂದ ವೀಕ್ಷಕರ ಕೊಠಡಿಗೆ ಬರುವಾಗ ದರ್ಶನ್ ಅವರನ್ನು ನೋಡಿ ಫ್ಯಾನ್ಸ್ ಜೈಕಾರ ಹಾಕಿದ್ದಾರೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದ ದರ್ಶನ್ಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ಅಕ್ಟೋಬರ್ 4ಕ್ಕೆ ಮುಂದೂಡಿಕೆ ಆಗಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರೇ ಮನವಿ ಮಾಡಿದ ಕಾರಣ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಯಿತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.