‘ಬಿಸಿಲು ಕಾಣದೆ ಕೈಯೆಲ್ಲ ಫಂಗಸ್ ಬಂದಿದೆ’; ಜಡ್ಜ್ ಎದುರು ದರ್ಶನ್ ಕಣ್ಣೀರು

Updated on: Sep 09, 2025 | 12:15 PM

ದರ್ಶನ್ ಅವರಿಗೆ ಜೈಲು ಅಕ್ಷರಶಃ ನರಕಯಾತನೆ ಆಗಿದೆ. ಅವರು ಈಗ ಜಡ್ಜ್​ ಎದುರೇ ವಿಷ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ಕೇಳಿ ಜಡ್ಜ್ ಸಾಕಷ್ಟು ಶಾಕ್ ಆದರು. ಈ ರೀತಿ ಕೇಳಬಾರದು ಎಂದು ಅವರು ಹೇಳಿದ್ದಾರೆ. ಕೆಲವರು ಅವರು ನಟನೆ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡದಲ್ಲಿ ಲಭ್ಯವಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶಣ್ ಅವರು ಮತ್ತೆ ಜೈಲು ಸೇರಿದ್ದಾರೆ. ಅಲ್ಲಿ ಅವರಿಗೆ ನರಕಯಾತನೆ ಉಂಟಾಗುತ್ತಿದೆ. ಹೀಗಾಗಿ, ಅವರು ವಿಶೇಷ ಮನವಿ ಒಂದನ್ನು ಇಟ್ಟಿದ್ದಾರೆ. ‘ಕೈಯೆಲ್ಲಾ ಫಂಗಸ್ ಬಂದಿದೆ. ಬಿಸಿಲು ಕಾಣದೆ ತಿಂಗಳಾಯಿತು. ದಯವಿಟ್ಟು ವಿಷ ಕೊಟ್ಟುಬಿಡಿ’ ಎಂದು ದರ್ಶನ್ ಕೇಳಿದ್ದಾರೆ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More