AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ ಆನೆಯ ಸಮಾಧಿ ವಿಚಾರ: ಅರಣ್ಯಾಧಿಕಾರಿಗಳ ನಡೆಗೆ ದರ್ಶನ್​ ಆಪ್ತರು ಗರಂ

ಅರ್ಜುನ ಆನೆಯ ಸಮಾಧಿ ವಿಚಾರ: ಅರಣ್ಯಾಧಿಕಾರಿಗಳ ನಡೆಗೆ ದರ್ಶನ್​ ಆಪ್ತರು ಗರಂ

ಮದನ್​ ಕುಮಾರ್​
|

Updated on: May 26, 2024 | 5:49 PM

Share

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ನಿರ್ಮಾಣಕ್ಕೆ ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಸಹಾಯ ಮಾಡಿದ್ದಾರೆ. ಆದರೆ ಈ ವಿಚಾರದಲ್ಲಿ ಗೊಂದಲ ಏರ್ಪಟ್ಟಿದೆ. ಅರಣ್ಯಾಧಿಕಾರಿಗಳು ಮೊದಲು ಅನುಮತಿ ನೀಡಿ, ನಂತರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ದರ್ಶನ್ ಆಪ್ತರು ಆರೋಪಿಸಿದ್ದಾರೆ. ಈ ಕುರಿತಾದ ವಿಡಿಯೋ ಇಲ್ಲಿದೆ..

ಅರ್ಜುನ ಆನೆ (Arjuna Elephant) ಸಮಾಧಿ ನಿರ್ಮಾಣಕ್ಕೆ ದರ್ಶನ್​ ಅವರು ಮುಂದಾಗಿದ್ದು, ಧನಸಹಾಯ ಮಾಡಿದ್ದಾರೆ. ಆದರೆ ಈ ವಿಚಾರದಲ್ಲಿ ಅರಣ್ಯಾಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದರ್ಶನ್​ (Darshan) ಆಪ್ತರಾದ ನಾಗರಾಜ್​ ಮಾತನಾಡಿದ್ದಾರೆ. ‘ನಾನು ದರ್ಶನ್​ ಅವರ ಸ್ನೇಹಿತ ನಾಗರಾಜ್​. ದರ್ಶನ್​ ಅವರ ಪರವಾಗಿ ಮಾತನಾಡುತ್ತಿದ್ದೇನೆ. ದರ್ಶನ್​ ಅವರು ಅನಧಿಕೃತವಾಗಿ ಕಲ್ಲುಗಳನ್ನು ಮತ್ತು ಹುಡುಗರನ್ನು ಕಳಿಸಿದ್ದಾರೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದೀರಲ್ಲ.. ಮಾಧ್ಯಮಗಳಲ್ಲಿ ನೋಡಿ ಪ್ರಸಾರ ಆಗಿದೆ. ಮೇ 2ರಂದು ದರ್ಶನ್​ ಅವರು ಅರ್ಜುನನ ಸಮಾಧಿ (Arjuna Elephant Samadhi) ಬಗ್ಗೆ ಒಂದು ಟ್ವೀಟ್​ ಮಾಡಿದ್ದರು. ಆ ಬಳಿಕ ಸರ್ಕಾರ, ಅರಣ್ಯ ಇಲಾಖೆ, ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲಿಲ್ಲ. ಆದರೆ ಮಾವುತ ವಿನು ಮತ್ತು ಹುಡುಗರು ಎಎಸ್​ಎಫ್​ ಅವರಿಗೆ ಮನವಿ ಮಾಡಿಕೊಂಡು ಅನುಮತಿ ಪಡೆದರು. ಆ ಬಳಿಕ ದರ್ಶನ್​ ಅವರು ಹಣ ನೀಡಿ ನಮಗೆ ಕಲ್ಲುಗಳ ವ್ಯವಸ್ಥೆ ಮಾಡಿದರು. ಆ ಬಳಿಕವೇ ನಾವು ಕಾಡಿನ ಒಳಗೆ ಹೋಗಿದ್ದು. ಕೆಲಸ ಶುರುಮಾಡಿದಾಗ ಆರ್​ಎಫ್​ಓ ಅವರು ತಡೆದಿದ್ದೀರಿ. ಹಣ ವಾಪಸ್​ ಕೊಟ್ಟಿದ್ದೇವೆ ಅಂತ ನೀವು ಹೇಳುತ್ತಿದ್ದೀರಿ. ಆದರೆ ಅದು ಯಾವ ಖಾತೆಗೂ ಬಂದಿಲ್ಲ. ಆ ಹಣದ ಅವಶ್ಯಕತೆ ದರ್ಶನ್​ ಅವರಿಗೆ ಇಲ್ಲ. ತಾಯಿ ಚಾಮುಂಡೇಶ್ವರಿ ಅವರನ್ನು ಚೆನ್ನಾಗಿ ಇಟ್ಟಿದ್ದಾರೆ’ ಎಂದು ನಾಗರಾಜ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More