ದರ್ಶನ್ಗೆ ಕೊಡಲು ಬಗೆಬಗೆಯ ತಿಂಡಿ ತಂದ ಆಪ್ತರು; ಆದರೆ ಪೊಲೀಸರು ಮಾಡಿದ್ದೇನು?
ಕೊಲೆ ಆರೋಪ ಹೊತ್ತಿರುವ ದರ್ಶನ್ ಅವರಿಗೆ ಜೈಲಿನ ಊಟ ಸೇವಿಸುವುದು ಕಷ್ಟ ಆಗುತ್ತಿದೆ. ಹಾಗಾಗಿ ಹೊರಗಡೆಯಿಂದ ಅವರಿಗಾಗಿ ಬೇಕರಿ ಪದಾರ್ಥಗಳನ್ನು ಆಪ್ತರು ತಂದಿದ್ದಾರೆ. ಆದರೆ ಜೈಲಿನ ಗೇಟಿನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಬೇಕರಿ ತಿಂಡಿಗಳನ್ನು ಒಳಗೆ ತೆಗೆದುಕೊಂಡು ಹೋಗಲು ಪೊಲೀಸರು ಅನುಮತಿ ನೀಡಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ನಟ ದರ್ಶನ್ ಅವರಿಗೆ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ದರ್ಶನ್ಗೆ ನೀಡಲು ಅವರ ಆಪ್ತರು ಬಗೆಬಗೆಯ ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಆದರೆ ಈ ಬೇಕರಿ ಪದಾರ್ಥಗಳನ್ನು ಜೈಲಿನ ಒಳಗೆ ತರಲು ಪೊಲೀಸರು ಅವಕಾಶ ನೀಡಿಲ್ಲ. ಹಲವು ಬಗೆಯ ತಿಂಡಿಗಳಿರುವ ಬಾಕ್ಸ್ ಅನ್ನು ಪೊಲೀಸರು ಜೈಲಿನ ಗೇಟ್ನಲ್ಲೇ ತಡೆದಿದ್ದಾರೆ. ‘ಈ ವಸ್ತುಗಳನ್ನು ಬಿಡಲು ಸಾಧ್ಯವಿಲ್ಲ. ಹಣ್ಣು ಮಾತ್ರ ನೀಡಬಹುದು’ ಎಂದು ಖಡಕ್ ಆಗಿ ಪೊಲೀಸರು ಹೇಳಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ ಹಾಗೂ ಇತರೆ ಸಹಚರರು ಕೂಡ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
