ನಟ ದರ್ಶನ್ ಅವರಿಗೆ ಜೈಲಿನಲ್ಲಿ ಕಾಲ ಕಳೆಯುವುದು ಕಷ್ಟ ಆಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ದರ್ಶನ್ಗೆ ನೀಡಲು ಅವರ ಆಪ್ತರು ಬಗೆಬಗೆಯ ತಿಂಡಿ ತಿನಿಸುಗಳನ್ನು ತಂದಿದ್ದಾರೆ. ಆದರೆ ಈ ಬೇಕರಿ ಪದಾರ್ಥಗಳನ್ನು ಜೈಲಿನ ಒಳಗೆ ತರಲು ಪೊಲೀಸರು ಅವಕಾಶ ನೀಡಿಲ್ಲ. ಹಲವು ಬಗೆಯ ತಿಂಡಿಗಳಿರುವ ಬಾಕ್ಸ್ ಅನ್ನು ಪೊಲೀಸರು ಜೈಲಿನ ಗೇಟ್ನಲ್ಲೇ ತಡೆದಿದ್ದಾರೆ. ‘ಈ ವಸ್ತುಗಳನ್ನು ಬಿಡಲು ಸಾಧ್ಯವಿಲ್ಲ. ಹಣ್ಣು ಮಾತ್ರ ನೀಡಬಹುದು’ ಎಂದು ಖಡಕ್ ಆಗಿ ಪೊಲೀಸರು ಹೇಳಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ ಹಾಗೂ ಇತರೆ ಸಹಚರರು ಕೂಡ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.