ದರ್ಶನ್​ಗೆ ಎಣ್ಣೆ-ಬಾಡೂಟ, ನನ್ನ ಮಗನಿಗೆ ಜೈಲೂಟವಾದರೂ ಸರಿಯಾಗಿ ಸಿಗುತ್ತಿದೆಯಾ ಅಂತ ಗೊತ್ತಿಲ್ಲ: ಆರೋಪಿ ನಂದೀಶ್ ತಂದೆ

ಮಗ ಜೈಲು ಸೇರಿದ ಎರಡೂವರೆ ತಿಂಗಳ ಅವಧಿಯಲ್ಲಿ ಶ್ರೀನಿವಾಸಯ್ಯ ಮತ್ತು ಅವರ ಪತ್ನಿ ಕೇವಲ ಮೂರು ಬಾರಿ ಮಾತ್ರ ನೋಡಲು ಹೋಗಿದ್ದಾರೆ. ಹೋದಾಗೆಲ್ಲ ಮಗನಿಗಾಗಿ ಅವರು ಹಣ್ಣು ತೆಗೆದುಕೊಂಡು ಹೋಗಿರುವರಾದರೂ ಅದನ್ನು ಅವನೇ ತಿಂದನೋ ಬೇರೆಯವರ ಪಾಲಾಯಿತೋ ಅಂತ ಆಳವಾದ ನೋವಿನೊಂದಿಗೆ ಹೇಳುತ್ತಾರೆ.

ದರ್ಶನ್​ಗೆ ಎಣ್ಣೆ-ಬಾಡೂಟ, ನನ್ನ ಮಗನಿಗೆ ಜೈಲೂಟವಾದರೂ ಸರಿಯಾಗಿ ಸಿಗುತ್ತಿದೆಯಾ ಅಂತ ಗೊತ್ತಿಲ್ಲ: ಆರೋಪಿ ನಂದೀಶ್ ತಂದೆ
|

Updated on: Aug 27, 2024 | 10:36 AM

ಮಂಡ್ಯ: ಉಳ್ಳವರದ್ದೇ ಕಾಲ ಅಂತಾರಲ್ಲ ಅದು ನಿಜ ಸ್ವಾಮಿ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂಬರ್ 2 ಆಗಿ ಜೈಲು ಸೇರಿರುವ ಚಿತ್ರನಟ ದರ್ಶನ್ ಜೈಲಲ್ಲಿರುವ ಕೆಲ ಕುಖ್ಯಾತ ರೌಡಿಗಳೊಂದಿಗೆ ಕಾಫಿ ಹೀರುತ್ತ, ಸಿಗರೇಟು ಸೇದುತ್ತ, ಎಣ್ಣೆ ಹೊಡೆಯುತ್ತ ಮಜವಾಗಿ ಕಾಲ ಕಳೆಯುತ್ತಿದ್ದರೆ, ಅದೇ ಪ್ರಕರಣದಲ್ಲಿ ಅರೋಪಿ ನಂಬರ್ 5 ಅಗಿ ಅದೇ ಜೈಲಲ್ಲಿರುವ ನಂದೀಶನಿಗೆ ಜೈಲೂಟ ಸಹ ಸರಿಯಾಗಿ ಸಿಗುತ್ತದೆಯೋ ಇಲ್ಲವೋ ಅಂತ ಅವರ ವಯಸ್ಸಾದ ತಂದೆ ಕೊರಗುತ್ತಿದ್ದಾರೆ. ಹತ್ಯೆಯಲ್ಲಿ ನಂದೀಶನ ಪಾತ್ರ ಏನು ಅಂತ ಯಾರಿಗೂ ಗೊತ್ತಿಲ್ಲ, ಕುರುಡು ಅಭಿಮಾನಕ್ಕೆ ಜೋತು ಬಿದ್ದು ‘ದರ್ಶನ್ ಅಣ್ಣ’ ಕರೆದ ಅಂತ ಅವರ ಜೊತೆ ಹೋಗಿ ಜೈಲು ಸೇರಿದ 15 ಜನರಲ್ಲಿ ನಂದೀಶ ಕೂಡ ಒಬ್ಬರು. ಅವರ ತಂದೆ ಶ್ರೀನಿವಾಸಯ್ಯ ಒಂದು ಗೂಡಂಗಡಿ ನಡೆಸುತ್ತಾರೆ ಮತ್ತು ತಾಯಿ ಕೂಲಿ ನಾಲಿ ಮಾಡುತ್ತಾರೆ. ಮಗನನ್ನು ನೋಡಲು ಅವರು ದುಡ್ಡು ಹೊಂದಿಸಿಕೊಂಡು ಬೆಂಗಳೂರಿಗೆ ಹೋಗಬೇಕಾಗುತ್ತದೆ. ಶ್ರೀನಿವಾಸಯ್ಯನವರ ಬಳಿ ಮಗನಿಗಾಗಿ ಒಬ್ಬ ವಕೀಲನನ್ನು ನೇಮಿಸಿಕೊಳ್ಳುವಷ್ಟು ಹಣವಿಲ್ಲ. ಕರೆದೊಯ್ದವರು ಕರೆತರುತ್ತಾರೆ ಎಂಬ ದೂರದ ನಿರೀಕ್ಷೆಯೊಂದಿಗೆ ಇವರು ಬದುಕು ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪತ್ನಿ ಭೇಟಿ ಬಳಿಕ ದರ್ಶನ್ ಓಡುತ್ತಿದ್ದುದು ವಿಲ್ಸನ್ ​ಗಾರ್ಡನ್​ ನಾಗನ ಬಳಿ; ಕಾರಣವೇನು?

Follow us
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ