ಪತ್ನಿ ಕೊಟ್ಟ ಬ್ಯಾಗ್ ಹಿಡಿದು ಸೈಲೆಂಟ್ ಆಗಿ ಸೆಲ್​ಗೆ ಹೋದ ದರ್ಶನ್; ಹೀಗಿದೆ ದಾಸನ ಸ್ಥಿತಿ

ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ದರ್ಶನ್​ಗೆ ಆತಂಕ ಹೆಚ್ಚಾಗಿದೆ. ಮುಂದೆ ಏನಾಗಲಿದೆಯೋ ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರನ್ನು ನೋಡಲು ವಿಜಯಲಕ್ಷ್ಮಿ ತೆರಳಿದ್ದಾರೆ. ಗಂಡನಿಗೆ ಕೆಲವು ಅಗತ್ಯ ವಸ್ತುಗಳನ್ನು ಅವರು ನೀಡಿದ್ದಾರೆ. ಪತ್ನಿಯ ಭೇಟಿ ಬಳಿಕ ದರ್ಶನ್​ ಅವರು ಸೈಲೆಂಟ್​ ಆಗಿ ಬ್ಯಾಗ್ ಹಿಡಿದುಕೊಂಡು ಸೆಲ್​ಗೆ ಮರಳಿದ್ದಾರೆ.

ಪತ್ನಿ ಕೊಟ್ಟ ಬ್ಯಾಗ್ ಹಿಡಿದು ಸೈಲೆಂಟ್ ಆಗಿ ಸೆಲ್​ಗೆ ಹೋದ ದರ್ಶನ್; ಹೀಗಿದೆ ದಾಸನ ಸ್ಥಿತಿ
| Updated By: ಮದನ್​ ಕುಮಾರ್​

Updated on: Sep 05, 2024 | 6:12 PM

ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್​ ಅವರನ್ನ ಭೇಟಿಯಾಗಲು ತೆರಳಿದ ವಿಜಯಲಕ್ಷ್ಮಿ ಅವರು ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಕೆಲವು ಅಗತ್ಯ ವಸ್ತುಗಳನ್ನು ಅವರು ದರ್ಶನ್​ಗೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯ ಆಗಿದ್ದು, ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ದರ್ಶನ್​ ಅವರನ್ನು ನೋಡಲು ಬಳ್ಳಾರಿ ಜೈಲಿನ ಹೊರಗೆ ಅಭಿಮಾನಿಗಳು ಜಮಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us