ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ದಾಸನಿಗೆ ಬೇಸರ

| Updated By: ಮದನ್​ ಕುಮಾರ್​

Updated on: Sep 12, 2024 | 4:02 PM

ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್​ ತೂಗುದೀಪ ಅವರು ತೆರಳಿದ್ದಾರೆ. ಆದರೆ ತಾಯಿ ಮೀನಾ ಅವರು ಬಳ್ಳಾರಿಗೆ ಹೋಗಿಲ್ಲ. ಆದ್ದರಿಂದ ದರ್ಶನ್​ಗೆ ಬೇಸರ ಆಗಿದೆ. ಲಾಯರ್​ ಜೊತೆಗೆ ದರ್ಶನ್​ ಮಾತುಕಥೆ ನಡೆಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿದ ದರ್ಶನ್​ ಅವರನ್ನು ಇಂದು (ಸೆಪ್ಟೆಂಬರ್​ 12) ಕುಟುಂಬದವರು ಭೇಟಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್​ ಅವರನ್ನು ಪತ್ನಿ ವಿಜಯಲಕ್ಷ್ಮಿ ಮತ್ತು ತಮ್ಮ ದಿನಕರ್ ಭೇಟಿ ಮಾಡಿದ್ದಾರೆ. ಜೈಲು ಸಂದರ್ಶಕರ ಕೊಠಡಿಯಲ್ಲಿ 25 ನಿಮಿಷಗಳ ಕಾಲ ಮಾತನಾಡಿದ್ದಾರೆ. ಕೊಲೆ ಕೇಸ್​ನಲ್ಲಿ ದರ್ಶನ್​ ಎ2 ಆಗಿದ್ದು, ಅವರ ವಿರುದ್ಧ ಅನೇಕ ಸಾಕ್ಷಿಗಳು ಇವೆ ಎಂಬುದು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on