ದರ್ಶನ್​ ಹೀರೋ ಅಲ್ಲ.. ಖಳನಾಯಕ! ಮಂಡ್ಯ ರೈತರ ಆಕ್ರೋಶ ನೋಡಿ

ಕಿರಣ್ ಹನುಮಂತ್​ ಮಾದಾರ್

Updated on: Jun 13, 2024 | 4:39 PM

ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹಿಸಿ ಇಂದು(ಗುರುವಾರ) ಮಂಡ್ಯ(Mandya)ದ ಸಂಜಯ್ ವೃತ್ತದಿಂದ ಡಿಸಿ ‌ಕಚೇರಿವರೆಗೆ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೃಹತ್​ ಮೆರವಣಿಗೆ ಮಾಡಿ, ಕೊಲೆ ಆರೋಪಿ ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಮಂಡ್ಯ, ಜೂ.13: ನಟ ದರ್ಶನ್ ಮತ್ತು ಗ್ಯಾಂಗ್​​ನಿಂದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಕೊಲೆ ಆರೋಪಿ ದರ್ಶನ್(Darshan) ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹಿಸಿ ಇಂದು(ಗುರುವಾರ) ಮಂಡ್ಯ(Mandya)ದ ಸಂಜಯ್ ವೃತ್ತದಿಂದ ಡಿಸಿ ‌ಕಚೇರಿವರೆಗೆ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೃಹತ್​ ಮೆರವಣಿಗೆ ಮಾಡಿ, ಕೊಲೆ ಆರೋಪಿ ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ರೈತ ಮುಖಂಡರೊಬ್ಬರು, ‘ನಾವು ಕೊಟ್ಟ ಭೀಕ್ಷೆಯಿಂದ ಇತ ಹೀರೋ ಆಗಿದ್ದ. ಈ ಪ್ರಕರಣದ ಮೂಲಕ ನಾನು ಹೀರೋ ಅಲ್ಲ, ಖಳನಾಯಕ ಎಂದು ಸಾಭೀತುಪಡಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.