AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ರನ್ನು ಐಸೋಲೇಟ್ ಮಾಡಿ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ: ಟಿಪಿ ಶೇಷ, ಡಿಐಜಿ

ದರ್ಶನ್​ರನ್ನು ಐಸೋಲೇಟ್ ಮಾಡಿ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ: ಟಿಪಿ ಶೇಷ, ಡಿಐಜಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 31, 2024 | 3:05 PM

Share

ಬಳ್ಳಾರಿ ಜೈಲಿನಲ್ಲಿ ಇಂಡಿಯನ್ ಟಾಯ್ಲೆಟ್ ಗಳನ್ನು ಅಳವಡಿಸಿರುವುದರಿಂದ ಸ್ಪೈನಲ್ ಕಾರ್ಡ್ ತೊಂದರೆಯಿಂದ ಬಳಲುತ್ತಿರುವ ದರ್ಶನ್, ಬಹಿರ್ದೆಶೆಗೆ ಬಹಳ ಕಷ್ಟವಾಗುತ್ತಿದೆ ಅಂತ ಹೇಳಿದ್ದಾರೆ, ಅವರ ಮೆಡಿಕಲ್ ರಿಪೋರ್ಟ್ ಒಮ್ಮೆ ಪರಿಶೀಲಿಸಿ ಅಗತ್ಯಬಿದ್ದರೆ ವೆಸ್ಟರ್ನ್ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಟಿಪಿ ಶೇಷ ಹೇಳಿದರು.

ಬಳ್ಳಾರಿ: ನಗರದ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉತ್ತರ ವಲಯ ಡಿಐಜಿ ಟಿಪಿ ಶೇಷ, ನಟ ದರ್ಶನ್ ರನ್ನು ಐಸೋಲೇಟ್ ಮಾಡಿ ಒಂದು ಪ್ರತ್ಯೇಕ ಸೆಲ್​ನಲ್ಲಿರಿಸಲಾಗಿದೆ. ಅಲ್ಲಿರುವ 15 ಸೆಲ್ ಗಳಲ್ಲಿ ಕೇವಲ 4 ಕೈದಿಗಳು ಮಾತ್ರ ಇದ್ದಾರೆ, ಈ ಸೆಲ್ ಗಳ ಸುತ್ತ ಮೂರು ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು ಅವುಗಳ ಫುಟೇಜನ್ನು ಪ್ರತಿದಿನ ಮಾನಿಟರ್ ಮಾಡಲಾಗುತ್ತದೆ ಮತ್ತು ದರ್ಶನ್ ಇರುವ ಸೆಲ್ ಅನ್ನು ಇಬ್ಬರು ಪೊಲೀಸರು ಬಾಡಿವೋರ್ನ್ ಕೆಮೆರಾ ಧರಿಸಿ 24/7 ಕಾವಲು ಕಾಯುತ್ತಿರುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಳ್ಳಾರಿ ಜೈಲಲ್ಲಿ ದರ್ಶನ್​ಗೆ ಮೂರನೇ ದಿನ, ಪರಿಶೀಲನೆಗೆ ಆಗಮಿಸಿದ ಉತ್ತರ ವಲಯ ಡಿಐಜಿ ಟಿಪಿ ಶೇಷ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.