ಜಾಮೀನಿಗೆ ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಆರೋಪಿ ದರ್ಶನ್ ಜಾಮೀನು ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಅವರ ಪರ ವಕೀಲರು ಆ ಬಗ್ಗೆ ಮಾತನಾಡಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇಂದು (ಸೆಪ್ಟೆಂಬರ್ 24) ವಕೀಲರು ದರ್ಶನ್ ಜೊತೆ ಮಾತನಾಡಿ ಬಂದಿದ್ದಾರೆ. ನಂತರ ಮಾಧ್ಯಮಗಳ ಎದುರು ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ.
ನಟ ದರ್ಶನ್ಗೆ ಜಾಮೀನು ಸಿಗುವುದು ಯಾವಾಗ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆ ಬಗ್ಗೆ ದರ್ಶನ್ ಪರ ವಕೀಲರು ಮಾತನಾಡಿದ್ದಾರೆ. ‘ಕಳೆದ ಶನಿವಾರ ನಾವು ಬೇಲ್ಗೆ ಅರ್ಜಿ ಹಾಕಿದ್ದೇವೆ. ಕಾನೂನಿನ ಪ್ರಕ್ರಿಯೆ ನಡೆಯುತ್ತಿದೆ. ಇದು 302 ಪ್ರಕರಣ ಆದ್ದರಿಂದ ಮೊದಲ ಬಾರಿಗೆ ಸೆಷನ್ಸ್ ಕೋರ್ಟ್ನಲ್ಲೇ ಅರ್ಜಿ ಸಲ್ಲಿಸಬೇಕು. ಅಲ್ಲಿ ಜಾಮೀನು ಸಿಗದಿದ್ದರೆ ಹೈಕೋರ್ಟ್ಗೆ ಹೋಗುತ್ತೇವೆ. ಕಾನೂನಿನ ಪ್ರಕ್ರಿಯೆ ಇರುವುದೇ ಹಾಗೆ. ಸೆಷನ್ಸ್ ಕೋರ್ಟ್ನಲ್ಲಿಯೇ ದರ್ಶನ್ಗೆ ಜಾಮೀನು ಸಿಗುತ್ತೆ ಎಂಬ ಭರವಸೆ ನಮಗೆ ಇದೆ’ ಎಂದು ವಕೀಲರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

