ನಟ ದರ್ಶನ್ಗೆ ಜಾಮೀನು ಸಿಗುವುದು ಯಾವಾಗ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆ ಬಗ್ಗೆ ದರ್ಶನ್ ಪರ ವಕೀಲರು ಮಾತನಾಡಿದ್ದಾರೆ. ‘ಕಳೆದ ಶನಿವಾರ ನಾವು ಬೇಲ್ಗೆ ಅರ್ಜಿ ಹಾಕಿದ್ದೇವೆ. ಕಾನೂನಿನ ಪ್ರಕ್ರಿಯೆ ನಡೆಯುತ್ತಿದೆ. ಇದು 302 ಪ್ರಕರಣ ಆದ್ದರಿಂದ ಮೊದಲ ಬಾರಿಗೆ ಸೆಷನ್ಸ್ ಕೋರ್ಟ್ನಲ್ಲೇ ಅರ್ಜಿ ಸಲ್ಲಿಸಬೇಕು. ಅಲ್ಲಿ ಜಾಮೀನು ಸಿಗದಿದ್ದರೆ ಹೈಕೋರ್ಟ್ಗೆ ಹೋಗುತ್ತೇವೆ. ಕಾನೂನಿನ ಪ್ರಕ್ರಿಯೆ ಇರುವುದೇ ಹಾಗೆ. ಸೆಷನ್ಸ್ ಕೋರ್ಟ್ನಲ್ಲಿಯೇ ದರ್ಶನ್ಗೆ ಜಾಮೀನು ಸಿಗುತ್ತೆ ಎಂಬ ಭರವಸೆ ನಮಗೆ ಇದೆ’ ಎಂದು ವಕೀಲರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.