AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ

ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ

ರಾಮು, ಆನೇಕಲ್​
| Edited By: |

Updated on: Jul 01, 2024 | 4:10 PM

Share

ಇಷ್ಟು ದಿನಗಳ ಕಾಲ ದರ್ಶನ್​ ಅವರು ತಾಯಿ ಮತ್ತು ಸಹೋದರನ ಜೊತೆ ಮನಸ್ತಾಪ ಮಾಡಿಕೊಂಡಿದ್ದರು ಎಂಬ ಮಾಹಿತಿ ಇದೆ. ಆದರೆ ಈಗ ದರ್ಶನ್​ಗೆ ಕಷ್ಟಕಾಲ ಎದುರಾಗಿದ್ದು, ಅವರ ಪರ ನಿಲ್ಲಲು ತಾಯಿ ಮೀನಾ ಮತ್ತು ತಮ್ಮ ದಿನಕರ್ ತೂಗುದೀಪ ಬಂದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ ಅವರನ್ನು ನೋಡಿ ಮೀನಾ ಅವರು ಅತ್ತಿದ್ದಾರೆ.

ಕೊಲೆ ಪ್ರಕರಣದ ಆರೋಪಿಯಾಗಿ ದರ್ಶನ್​ ಅವರು ಜೈಲು ಸೇರಿರುವುದರಿಂದ ಅವರ ಕುಟುಂಬದವರಿಗೆ ತೀವ್ರ ನೋವಾಗಿದೆ. ಇಂದು (ಜುಲೈ 1) ದರ್ಶನ್​ ತಾಯಿ ಮೀನಾ, ಸಹೋದರ ದಿನಕರ್ ತೂಗುದೀಪ, ಮಗ ವಿನೀಶ್​, ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಬಂದಿದ್ದಾರೆ. ದರ್ಶನ್​ ಅವರನ್ನು ನೋಡಿ ತಾಯಿ ಮೀನಾ ಅವರು ಕಣ್ಣೀರು ಹಾಕಿದ್ದಾರೆ. ತಾಯಿಯನ್ನು ನೋಡುತ್ತಿದ್ದಂತೆಯೇ ದರ್ಶನ್​ ಕೂಡ ಗಳಗಳನೆ ಅತ್ತಿದ್ದಾರೆ. ಬಳಿಕ ದರ್ಶನ್​ ಅವರು ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿಸಿ, ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಸಾಯಿಸಿದ ಆರೋಪ ದರ್ಶನ್​ ಮೇಲಿದೆ. ನಟಿ ಪವಿತ್ರಾ ಗೌಡ ಹಾಗೂ ಸಹಚರರ ಮೇಲೂ ಆರೋಪ ಇದೆ. ಎಲ್ಲ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More