AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸಿ ​ರೂಂನಲ್ಲಿ ಮಲಗಿಸ್ತೀನಿ ಎಂದವರು ದೇವರಿಗೆ ವಂದಿಸ್ತಾರೆ’; ಪ್ರಥಮ್

‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸಿ ​ರೂಂನಲ್ಲಿ ಮಲಗಿಸ್ತೀನಿ ಎಂದವರು ದೇವರಿಗೆ ವಂದಿಸ್ತಾರೆ’; ಪ್ರಥಮ್

ರಾಜೇಶ್ ದುಗ್ಗುಮನೆ
|

Updated on:Jul 31, 2025 | 2:16 PM

Share

ದರ್ಶನ್ ಫ್ಯಾನ್ಸ್ vs ಪ್ರಥಮ್ ಎಂಬಂಥ ಪರಿಸ್ಥಿತಿ ನಿರ್ಮಾಣ ಆಗಿದೆ. ದರ್ಶನ್ ಫ್ಯಾನ್ಸ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾಗಿ ಪ್ರಥಮ್ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದಾರೆ. ಈಗ ಪ್ರಥಮ್ ಒಂದು ಪ್ರಶ್ನೆ ಕೇಳಿದ್ದಾರೆ. ಅದೃಷ್ಟದೇವತೆ ಬಟ್ಟೆ ಬಿಚ್ಚಿಸಿ ಬೆಡ್​ರೂಂನಲ್ಲಿ ಮಲಗಸ್ತೀನಿ ಎಂದವರು ಈಗ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದಿದ್ದಾರೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ (Vijayalkshmi) ಅವರು ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವಿಚಾರದ ಬಗ್ಗೆ ಪ್ರಥಮ್ ಮಾತನಾಡಿದ್ದಾರೆ. ಈ ಮೊದಲು ಸಂದರ್ಶನ ಒಂದರಲ್ಲಿ ಮಾತನಾಡುವಾಗ ದರ್ಶನ್ ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ‘ಅದೃಷ್ಟದೇವತೆ ಬಂದರೆ ಅದರ ಬಟ್ಟೆ ಬಿಚ್ಚಿಸಿ ರೂಂನಲ್ಲಿ ಕೂಡಿ ಹಾಕಬೇಕು. ಆಗ ಅದು ಎಲ್ಲಿಯೂ ಹೋಗಲ್ಲ’ ಎಂಬರ್ಥದಲ್ಲಿ ಮಾತನಾಡಿದ್ದರು. ಈ ವಿಚಾರವನ್ನು ಪ್ರಥಮ್ ಉಲ್ಲೇಖಿಸಿದ್ದಾರೆ. ‘ದರ್ಶನ್ ಕಾಮಾಕ್ಯ ದೇವಸ್ಥಾನಕ್ಕೆ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಈ ಮೊದಲು ಅದೃಷ್ಟ ಲಕ್ಷ್ಮಿ ಬಂದರೆ ಬಟ್ಟೆ ಬಿಚ್ಚಿಸಿ ರೂಂನಲ್ಲಿ ಕೂಡಿ ಹಾಕ್ತಿನಿ ಎಂದವರು ಈಗ ಹೋಗಿ ಕಾಮಾಕ್ಯ ದೇವರಿಗೆ ವಂದಿಸುತ್ತಿದ್ದಾರೆ’ ಎಂದಿದ್ದಾರೆ ಪ್ರಥಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 31, 2025 11:06 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More