ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್​; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ

Updated on: Dec 18, 2024 | 11:11 AM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಇಷ್ಟು ದಿನ ಆಸ್ಪತ್ರೆಯಲ್ಲಿ ಇದ್ದರು. ಈಗ ಅವರು ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಕಣ್ಣಿಗೆ ಕನ್ನಡಕ ಹಾಕಿ, ಸ್ಟೈಲಿಶ್ ಆಗಿ ನಡೆದುಕೊಂಡು ಅವರು ಹೊರಕ್ಕೆ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದರು. ಈ ಕಾರಣಕ್ಕೆ ಕಳೆದ ಒಂದೂವರೆ ತಿಂಗಳಿಂದ ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲೇ ಇದ್ದರು.  ಈಗ ಅವರಿಗೆ ಜಾಮೀನು ಸಿಕ್ಕಿದ್ದು, ಅವರು ಶಸ್ತ್ರಚಿಕಿತ್ಸೆ ಮಾಡಿಸದೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಇಂದು (ಡಿಸೆಂಬರ್ 18) ಆಸ್ಪತ್ರೆಯಿಂದ ಹೊರ ಬಂದ ಅವರು, ರೆಡಿ ಇದ್ದ ಕಾರುಗಳನ್ನು ಏರಿ ತೆರಳಿದ್ದಾರೆ. ಈ ವೇಳೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 18, 2024 11:10 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More