AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ ಬಾಸ್ ಭೇಟಿಯಾಗಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿಯವರನ್ನು ನೋಡಲು ನೆರೆದ ಅಭಿಮಾನಿಗಳು

ಡಿ ಬಾಸ್ ಭೇಟಿಯಾಗಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿಯವರನ್ನು ನೋಡಲು ನೆರೆದ ಅಭಿಮಾನಿಗಳು

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 31, 2024 | 7:49 PM

Share

ಪತಿಯನ್ನು ನೋಡಲು ಬಂದಿದ್ದ ವಿಜಯಲಕ್ಷ್ಮಿ ಭಾರವಾದ ಹೃದಯದಿಂದ ಮತ್ತು ಕಳೆಗುಂದಿದ ಮುಖಭಾವದೊಂದಿಗೆ ವಾಪಸ್ಸು ಹೋದರು ಎಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ. ಮತ್ತೇನು ಮಾಡಿಯಾರು? ಕೊಲೆ ಆರೋಪ ಸಾಬೀತಾದರೆ ದರ್ಶನ್ ಗೆ ಯಾವ ಶಿಕ್ಷೆ ಕಾದಿದೆಯೋ? ಅದೇ ಆನಿಶ್ಚಿತತೆಯೊಂದಿಗೆ ವಿಜಯಲಕ್ಷ್ಮಿ ವಾಪಸ್ಸು ಹೋಗಿರುತ್ತಾರೆ.

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ರನ್ನು ನೋಡಲು ಇವತ್ತು ಅವರ ಪತ್ನಿ ವಿಜಯಲಕ್ಷ್ಮಿ ಬಂದಿದ್ದರು. ಅವರ ಅಗಮನದ ಸುದ್ದಿ ಬಳ್ಳಾರಿ ನಗರದಲ್ಲಿ ಕಾಳ್ಗಿಚ್ಚಿನಂತೆ ಹರಡಿತು. ತಮ್ಮ ಡಿ ಬಾಸ್ ನನ್ನು ನೋಡಲು ಬಂದ ವಿಜಯಲಕ್ಷ್ಮಿ ಅವರನ್ನು ನೋಡಲು ಅಭಿಮಾನಿಗಳು ಬಾರದಿರುತ್ತಾರೆಯೇ? ತಂಡೋಪತಂಡವಾಗಿ ಬಂದು ಜೈಲಿನ ಮುಂದೆ ನೆರೆದರು. ಜನ ಸಾಲಾಗಿ ನಿಂತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಳ್ಳಾರಿ ಜೈಲಲ್ಲಿ ದರ್ಶನ್​ಗೆ ಮೂರನೇ ದಿನ, ಪರಿಶೀಲನೆಗೆ ಆಗಮಿಸಿದ ಉತ್ತರ ವಲಯ ಡಿಐಜಿ ಟಿಪಿ ಶೇಷ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More