ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್

| Updated By: ಮದನ್​ ಕುಮಾರ್​

Updated on: Oct 22, 2024 | 9:45 PM

ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್​ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್​ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್​ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ. ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ಅಡ್ಡ ಬರುವ ಸಾಧ್ಯತೆ ಇರುವುದರಿಂದ ಪೊಲೀಸ್ ಭದ್ರತೆ ನೀಡಲಾಗಿದೆ.

ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಗಿರುವುದರಿಂದ ವೈದ್ಯರು ಜೈಲಿಗೆ ಬಂದು ಆರೋಗ್ಯ ತಪಾಸಣೆ ಮಾಡಿದ್ದಾರೆ. ಬಳಿಕ ಅವರಿಗೆ ಎಂಆರ್​ಐ ಸ್ಕ್ಯಾನಿಂಗ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಆ ಕಾರಣಕ್ಕಾಗಿ ಹೆಲ್ತ್ ಚೆಕಪ್ ಮಾಡಲು ವಿಮ್ಸ್​ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್​ ಮೂಲಕ ದರ್ಶನ್ ಅವರನ್ನು ಕರೆದುಕೊಂಡ ಹೋಗಲಾಗಿದೆ. ಬಳ್ಳಾರಿಯ ಸರ್ಕಲ್​ಗಳಲ್ಲಿ ಭದ್ರತೆಯ ದೃಷ್ಟಿಯಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:45 pm, Tue, 22 October 24

Follow us on