AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ದರ್ಶನ್​ ಆ್ಯಂಡ್ ಗ್ಯಾಂಗ್

ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ದರ್ಶನ್​ ಆ್ಯಂಡ್ ಗ್ಯಾಂಗ್

ರಾಜೇಶ್ ದುಗ್ಗುಮನೆ
|

Updated on:Aug 15, 2025 | 10:21 AM

Share

ನಟ ದರ್ಶನ್ ಅವರು ಸದ್ಯ ರೇಣುಕಾಸ್ವಾಮಿ ಕೇಸ್​ನಲ್ಲಿ ಮತ್ತೆ ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ಹಲವು ಸಾಕ್ಷಿಗಳು ಸಿಕ್ಕಿದ್ದು ದರ್ಶನ್​ಗೆ ಮುಳುವಾಗಿದೆ. ಈಗ ದರ್ಶನ್ ಸೇರಿ ನಾಲ್ವರು ಒಂದೇ ಸೆಲ್​ನಲ್ಲಿ ಇದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ (Darshan) ಹಾಗೂ ಇತರ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಈ ಬೆನ್ನಲ್ಲೇ ದರ್ಶನ್ ಸೇರಿದಂತೆ ಬೆಂಗಳೂರಿನಲ್ಲಿದ್ದ ಐವರನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ರಾತ್ರಿ ಕಳೆದಿದೆ. ಒಂದೇ ಬ್ಯಾರಕ್​ನಲ್ಲಿ ದರ್ಶನ್​, ನಾಗರಾಜ್​, ಲಕ್ಷ್ಮಣ್, ಪ್ರದೋಶ್​ನ ಇಡಲಾಗಿದೆ. ಸದ್ಯ ಇವರು ಕ್ವಾರಂಟೈನ್ ಬ್ಯಾರಕ್​ನಲ್ಲಿ ಇದ್ದಾರೆ. ಶೀಘ್ರವೇ ಇವರಿಗೆ ಕೈದಿ ಸಂಖ್ಯೆ ಸಿಗಲಿದೆ. ನಿನ್ನೆ ರಾತ್ರಿ ಆರೋಪಿಗಳಿಗೆ ಮುದ್ದೆ, ಚಪಾತಿ, ಅನ್ನಸಾಂಬರ್ ಊಟ ನೀಡಲಾಗಿದೆ. ರಾತ್ರಿ ಜೈಲಿನಲ್ಲಿ ನಿದ್ದೆ ಮಾಡದೆ ದರ್ಶನ್ ಮತ್ತು ನಾಗರಾಜ್​ ಇತರರು ಹರಟೆ ಹೊಡೆದಿದ್ದಾರೆ. ಜೈಲಿನಲ್ಲಿ‌ ತಡರಾತ್ರಿವರೆಗೂ ಪ್ರದೋಶ್ ಕಣ್ಣೀರು ಹಾಕಿದ್ದಾರೆ. ಜೈಲಿನ ಮಹಿಳಾ ಬ್ಯಾರಕ್​ನಲ್ಲಿ ಪವಿತ್ರಾಗೌಡ ಅವರನ್ನು ಇರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 15, 2025 10:18 AM