ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ದಿನದಿಂದ ದಿನಕ್ಕೆ ದರ್ಶನ್ ಅವರ ಬೆನ್ನು ನೋವು ಜಾಸ್ತಿ ಆಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಅವರು ತುಂಬ ಕಷ್ಟಪಟ್ಟು ನಡೆಯುತ್ತಿದ್ದಾರೆ. ಆದಷ್ಟು ಬೇಗ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅನಾರೋಗ್ಯದ ಕಾರಣದಿಂದ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಣೆ ಅ.29ಕ್ಕೆ ಮುಂದೂಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್ಗೆ ಒಂದೆಡೆ ಜೈಲು ವಾಸ, ಇನ್ನೊಂದೆಡೆ ವಿಪರೀತ ಬೆನ್ನು ನೋವು. ಅವರ ಸ್ಥಿತಿ ಯಾರಿಗೂ ಬೇಡದಂತಾಗಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರು ನಡೆದಾಡಲು ಕೂಡ ಕಷ್ಟಪಡುತ್ತಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ. ಈಗಾಗಲೇ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸರ್ಜರಿ ಆಗಬೇಕು ಎಂದು ವೈದ್ಯರು ಸಲಹೆ ನೀಡಿದ್ದು, ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುವುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us