AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

ಮದನ್​ ಕುಮಾರ್​
|

Updated on: Jun 17, 2024 | 7:22 PM

Share

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ