AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

ಮದನ್​ ಕುಮಾರ್​
|

Updated on: Jun 17, 2024 | 7:22 PM

Share

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!