AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

ಮದನ್​ ಕುಮಾರ್​
|

Updated on: Jun 17, 2024 | 7:22 PM

Share

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು