ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

Follow us
|

Updated on: Jun 17, 2024 | 7:22 PM

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..