ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

Follow us
|

Updated on: Jun 17, 2024 | 7:22 PM

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ